Webdunia - Bharat's app for daily news and videos

Install App

ಪುನೀತ್ ಆಸೆ ಈಡೇರಿಸಲು ಮುಂದಾದ ಕುಟುಂಬ

Webdunia
ಶನಿವಾರ, 11 ಡಿಸೆಂಬರ್ 2021 (14:13 IST)
ಅಪ್ಪು ಕಂಡಿದ್ದ ಅನೇಕ ಕನಸುಗಳನ್ನು ಅವರ ಕುಟುಂಬದವರು ಈಗ ನನಸು ಮಾಡುತ್ತಿದ್ದಾರೆ. ಅದರ ಅಂಗವಾಗಿ ಇತ್ತೀಚೆಗೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿತ್ತು.

ಅದೇ ರೀತಿ ಈಗ ಇನ್ನೊಂದು ಕನಸನ್ನು ಡಾ. ರಾಜ್ಕುಮಾರ್ ಕುಟುಂಬ ಕೈಗೆತ್ತಿಕೊಳ್ಳುತ್ತಿದೆ. ಅಣ್ಣಾವ್ರು ಆಡಿ ಬೆಳೆದ ಮನೆಯನ್ನು ದುರಸ್ತಿ ಮಾಡಿಸಿ, ಅದನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ಚಾಮರಾಜನಗರ ಗಡಿಯ ತಾಳವಾಡಿ ಸಮೀಪದ ಗಾಜನೂರಿನಲ್ಲಿ ಡಾ. ರಾಜ್ಕುಮಾರ್ ಅವರು ಆಡಿ ಬೆಳೆದ ಮನೆ ಇದೆ. ಆ ಜಾಗ ಎಂದರೆ ಪುನೀತ್ ರಾಜ್ಕುಮಾರ್ ಅವರಿಗೆ ಅಚ್ಚುಮೆಚ್ಚು ಆಗಿತ್ತು. ಅಲ್ಲಿಗೆ ಅವರು ಆಗಾಗ ಭೇಟಿ ನೀಡುತ್ತಿದ್ದರು.

ಸದ್ಯ ಈ ಮನೆ ಕುಸಿಯುವ ಹಂತದಲ್ಲಿದೆ. ಕಳೆದ ಮೂರುವರೆ ತಿಂಗಳ ಹಿಂದೆ ಗಾಜನೂರಿನ ಹಳೆ ಮನೆಗೆ ಪುನೀತ್ ಭೇಟಿ ನೀಡಿದ್ದರು. ಈ ವರ್ಷ ಸುರಿದ ಭಾರಿ ಮಳೆಯಿಂದಾಗಿ ಈ ಮನೆಗೆ ಹಾನಿ ಆಗಿದೆ. ಹಾಗಾಗಿ ಅದನ್ನು ದುರಸ್ತಿ ಮಾಡಿಸಲು ಅಪ್ಪು ನಿರ್ಧರಿಸಿದ್ದರು.

ಗಾಜನೂರಿಗೆ ಮತ್ತೆ ಬಂದು ಅಪ್ಪಾಜಿಯವರ ಹಳೇ ಮನೆಯನ್ನು ದುರಸ್ತಿ ಮಾಡಿಸುವುದಾಗಿ ಪುನೀತ್ ರಾಜ್ಕುಮಾರ್ ಅವರು ಹೇಳಿದ್ದರು. ಆದರೆ ಆ ಕಾರ್ಯ ನೆರವೇರುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದರು. ಅಪ್ಪು ಅಂದುಕೊಂಡ ಕೆಲಸವನ್ನು ಈಗ ಅವರ ಕುಟುಂಬದವರು ಪೂರ್ಣಗೊಳಿಸಲು ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments