ಸಿದ್ಧರಾಮಯ್ಯ ಬಯೋಪಿಕ್ ಸಿನಿಮಾ ಶೂಟಿಂಗ್‌ಗೆ ತಾತ್ಕಲಿಕ ಬ್ರೇಕ್, ಕಾರಣ ಹೀಗಿದೆ

Sampriya
ಗುರುವಾರ, 3 ಅಕ್ಟೋಬರ್ 2024 (17:32 IST)
Photo Courtesy X
ಬೆಂಗಳೂರು: ಮುಡಾ ಹಗರಣದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದ ಹಾಗೇ ಇತ್ತ ಸಿದ್ದರಾಮಯ್ಯ ಜೀವನಾಧಾರಿತ ಚಿತ್ರವಾದ ಲೀಡರ್ ರಾಮಯ್ಯ ಸಿನಿಮಾದ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟುಗಳ ವಿವಾದದಲ್ಲಿ ಸಿದ್ದರಾಮಯ್ಯನವರು ಸಿಲುಕಿದ್ದು, ಆ ವಿಚಾರದಲ್ಲೀಗ ಕೇಂದ್ರದ ಜಾರಿ ನಿರ್ದೇಶನಾಲಯ ಕೂಡ ಕೇಸ್ ದಾಖಲಿಸಿದೆ. ಕೇಂದ್ರೀಯ ತನಿಖಾ ತನಿಖಾ ಸಂಸ್ಥೆಯೊಂದು ಈ ಕೇಸ್ ನಲ್ಲಿ ಕಾಲಿಟ್ಟಿರುವುದರಿಂದ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಚಿತ್ರತಂಡ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅದಲ್ಲದೆ ಚಿತ್ರೀಕರಣ ನಿಲುಗಡೆಗೆ ಸಿದ್ಧರಾಮಯ್ಯನವರ ಪಾತ್ರ ಮಾಡುತ್ತಿರುವ ತಮಿಳು ನಟ ವಿಜಯ್ ಸೇತುಪತಿಯವರ ಡೇಟ್ಸ್‌ ಸಮಸ್ಯೆಯೂ ಕಾರಣವಾಗಿದೆ ಎಂದು ಹೇಳಲಾಗಿದೆ.

ಖ್ಯಾತ ನಟ ಸೇತುಪತಿಯವರು ಸದ್ಯಕ್ಕೆ ಹಿಂದಿ ಸೇರಿದಂತೆ ತಮಿಳು ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಲೀಡರ್ ರಾಮಯ್ಯ ಸಿನಿಮಾವನ್ನು ಬೆಂಗಳೂರು ಮೂಲದ ಸತ್ಯರತ್ನಂ, ಗಂಗಾವತಿ ಮೂಲಕ ಹಯ್ಯಾತ್ ಫಿರ್ ಅವರು ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ಈಗಾಗಲೇ ಮೈಸೂರು ಭಾಗದಲ್ಲಿ ಸಿಎಂ ಬಾಲ್ಯ ಹಾಗೂ ಶಿಕ್ಷಣ ಸೇರಿ ಹಲವು ಸನ್ನಿವೇಶಗಳ ಶೂಟಿಂಗ್‌ ಪೂರ್ಣವಾಗಿತ್ತು. ಮೂಡಾ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಎರಡನೆ ಭಾಗದ ಸನ್ನಿವೇಶಗಳ ಚಿತ್ರಿಕರಣಕ್ಕೆ ಚಿತ್ರ ತಂಡ ಬ್ರೇಕ್‌ ಹಾಕಿ ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿದೆ, ಸದ್ಯಕ್ಕೆ ಶೂಟಿಂಗ್‌ ನಿಲ್ಲಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments