ತಪ್ಪಿತಸ್ಥರಿಗೆ ರಾಜಮರ್ಯಾದೆ ಕೊಡಬಾರದು; ಕಠಿಣ ಶಿಕ್ಷೆ ಆಗಲಿ ಎಂದ ಇಂದ್ರಜಿತ್‌ ಲಂಕೇಶ್‌

Sampriya
ಗುರುವಾರ, 13 ಜೂನ್ 2024 (14:25 IST)
Photo Courtesy X
ಹುಬ್ಬಳ್ಳಿ: ನನ್ನ ಸಹೋದರಿ ಗೌರಿ‌ ಕೊಲೆಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರ ಪತ್ನಿಗೂ ಅನ್ಯಾಯವಾಗಿದೆ. ಅವರಿಗೂ ನ್ಯಾಯ‌ ಕೊಡಿಸುವ ಕೆಲಸ ಆಗಬೇಕು  ನಟ, ನಿರ್ದೇಶ ಇಂದ್ರಜೀತ್ ಲಂಕೇಶ್ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯನ್ನು ಇಡೀ ಚಿತ್ರರಂಗ ಖಂಡಿಸುತ್ತದೆ. ಯಾರೇ ಕೊಲೆ ಮಾಡಿದರೂ ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಇಂದ್ರಜೀತ್ ಲಂಕೇಶ್ ಆಗ್ರಹಿಸಿದರು.

ಕೊಲೆ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌. ಕೊಲೆ ಆರೋಪಿ ಯಾರು ಎಂದು ಪೊಲೀಸ್‌ ಕಮಿಷನರ್ ಸ್ಪಷ್ಟಪಡಿಸಿದ ನಂತರ ಮೃತರ ಕುಟುಂಬದ ಪರವಾಗಿ ನಾನೂ ಪ್ರತಿಭಟನೆ ಮಾಡುತ್ತೇನೆ ಎಂದರು.

ಸಾಮಾಜಿಕ ಜಾಲತಾಣಗಳ ಮೂಲಕ ಕೆಲವರು ದ್ವೇಷ ಹರಡುವ, ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು. ಅಂತವರ ವಿರುದ್ದ ಸೈಬರ್ ಕ್ರೈಂ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇಂತಹ ಪ್ರಕರಣದಲ್ಲಿ‌ ಭಾಗಿಯಾದವರು ನಟ, ರಾಜಕಾರಣಿ ಯಾರೇ ಆದರೂ ಅವರಿಗೆ ರಾಜಮರ್ಯಾದೆ ಕೊಡಬಾರದು. ರೇಣಾಕಾಸ್ವಾಮಿ ಪತ್ನಿ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರನ್ನು ಭೇಟಿಯಾಗಿ ಸಾಂತ್ವನ ಹೇಳುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments