ಜು.18ರ ವರೆಗೆ ದರ್ಶನ್‌ ಗ್ಯಾಂಗ್‌ಗೆ ಜೈಲೇ ಗತಿ, ಆದೇಶ ಹೊರಡಿಸಿದ ಜಡ್ಜ್‌

Sampriya
ಗುರುವಾರ, 4 ಜುಲೈ 2024 (15:32 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಹಲವು ಆರೋಪಿಗಳಿಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಕಸ್ಟಡಿ ನಂತರ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸೇರಿ ಹಲವು ಆರೋಪಿಗಳ ಅವಧಿ ಇಂದು ಮುಕ್ತಾಯಗೊಂಡ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಾಯಿತು.  

ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರ ವರೆಗೆ ನಟ ದರ್ಶನ್ ಸೇರಿದಂತೆ ಹಲವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.  ಇದರಿಂದ ದರ್ಶನ್‌ ಗ್ಯಾಂಗ್‌ ಪರಪ್ಪನ ಅಗ್ರಹಾರವೇ ಗತಿಯಾಗಿದೆ.

ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದೆಂಬ ಕೋಪದಲ್ಲಿ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ, ಚಿತ್ರಹಿಂಸೆ ಕೊಟ್ಟು ಕೊಲೆ ನಡೆಸಿತ್ತು. ಈ ಪ್ರಕರಣದಲ್ಲಿ ಪವಿತ್ರ ಅವರು ಎ1 ಆರೋಪಿಯಾಗಿದ್ದು, ದರ್ಶನ್ 12 ಆರೋಪಿಯಾಗಿದ್ದಾರೆ. ಈ ಪ್ರಕರಣ ಸಂಬಂಧ ದರ್ಶನ್ ಸೇರಿದಂತೆ 16 ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

ನನಗಾಗಿ ನನ್ನ ಹುಡುಗ ಯುದ್ಧ ಮಾಡಕ್ಕೂ ರೆಡಿ ಇರಬೇಕು: ರಶ್ಮಿಕಾ ಮಂದಣ್ಣ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ಮುಂದಿನ ಸುದ್ದಿ
Show comments