Webdunia - Bharat's app for daily news and videos

Install App

ನಿಮ್ಮ ಉದಯ ಟಿವಿಯಲ್ಲಿ ಇಂದಿನಿಂದ ಪ್ರಸಾರವಾಗಲಿದೆ ಹೊಸ ರಿಯಾಲಿಟಿ ಶೋ “ತುತ್ತಾ ಮುತ್ತಾ”

Webdunia
ಶನಿವಾರ, 27 ಅಕ್ಟೋಬರ್ 2018 (14:01 IST)
ಬೆಂಗಳೂರು : ಹೊಸ ರೀತಿಯ ರಿಯಾಲಿಟಿ ಶೋಗಳನ್ನು  ನೀಡುವುದರ ಮೂಲಕ ವೀಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿರುವ ಕರ್ನಾಟಕದ ಹೆಮ್ಮೆಯ ವಾಹಿನಿಯಾದ ಉದಯ ಟಿವಿ ಇದೀಗ “ತುತ್ತಾ ಮುತ್ತಾ” ಎನ್ನುವ ಹೊಸ ರಿಯಾಲಿಟಿ ಶೋ ಕಾರ್ಯಕ್ರಮವೊಂದನ್ನು ಶುರುಮಾಡಲಿದೆ.


ಹಿರಿತೆರೆ ಮತ್ತು ಕಿರುತೆರೆಯ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ತಾರೆಯರ ಮಡದಿ ಮತ್ತು ತಾಯಂದಿರ ನಡುವೆ ನಡೆಯುವ ಪೈಪೋಟಿಯೇ ಈ  “ತುತ್ತಾ ಮುತ್ತಾ” ಕಾರ್ಯಕ್ರಮವಾಗಿದೆ.


ಈ ಕಾರ್ಯಕ್ರಮ ನಿರಂಜನ್ ದೇಶಪಾಂಡೆ ನಿರೂಪಣೆಯಲ್ಲಿ  ಮೂಡಿಬರಲಿದೆ. ಆಟದಲ್ಲಿ ತಾರೆಯರ ತಾಯಿ ಒಂದು ಕಡೆ, ಹೆಂಡತಿ ಒಂದು ಕಡೆ ನಿಂತು ನಿರಂಜನ್ ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾರೆ. ಹನ್ನೆರಡು ಪ್ರಶ್ನೆಗಳಿಂದ ಐದು ಲಕ್ಷ ಗೆಲ್ಲುವ ಅವಕಾಶ ಇವರಿಗೆ ಇರುತ್ತದೆ. ಇದರಲ್ಲಿ ಸರಿಯಾಗಿ ಉತ್ತರ ಕೊಡುವವರು ಯಾರು ಎಂಬ ಆಯ್ಕೆ ಮಾತ್ರ ಬಂದ ತಾರೆಯರದ್ದು. ಉತ್ತರ ತಪ್ಪಾದಲ್ಲಿ ಬರೀ ಒಂದು ಕಡೆಯಿಂದ ಮಾತ್ರವಲ್ಲದೆ, ಆರೋಹಣ ಮತ್ತು ಅವರೋಹಣದ ಕ್ರಮದಲ್ಲಿ ಹಣ ಕಡಿತವಾಗುತ್ತ ಬರುತ್ತದೆ.


ಈಗಾಗಲೇ ಈ ಆಟದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್, ಹಾಸ್ಯ ನಟ ಕುರಿ ಪ್ರತಾಪ್ ಭಾಗವಹಿಸಿದ್ದಾರೆ.  ಈ “ತುತ್ತಾ ಮುತ್ತಾ” ಇದೇ ಶನಿವಾರದಿಂದ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments