ನಿಮ್ಮ ಉದಯ ಟಿವಿಯಲ್ಲಿ ಇಂದಿನಿಂದ ಪ್ರಸಾರವಾಗಲಿದೆ ಹೊಸ ರಿಯಾಲಿಟಿ ಶೋ “ತುತ್ತಾ ಮುತ್ತಾ”

Webdunia
ಶನಿವಾರ, 27 ಅಕ್ಟೋಬರ್ 2018 (14:01 IST)
ಬೆಂಗಳೂರು : ಹೊಸ ರೀತಿಯ ರಿಯಾಲಿಟಿ ಶೋಗಳನ್ನು  ನೀಡುವುದರ ಮೂಲಕ ವೀಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿರುವ ಕರ್ನಾಟಕದ ಹೆಮ್ಮೆಯ ವಾಹಿನಿಯಾದ ಉದಯ ಟಿವಿ ಇದೀಗ “ತುತ್ತಾ ಮುತ್ತಾ” ಎನ್ನುವ ಹೊಸ ರಿಯಾಲಿಟಿ ಶೋ ಕಾರ್ಯಕ್ರಮವೊಂದನ್ನು ಶುರುಮಾಡಲಿದೆ.


ಹಿರಿತೆರೆ ಮತ್ತು ಕಿರುತೆರೆಯ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ತಾರೆಯರ ಮಡದಿ ಮತ್ತು ತಾಯಂದಿರ ನಡುವೆ ನಡೆಯುವ ಪೈಪೋಟಿಯೇ ಈ  “ತುತ್ತಾ ಮುತ್ತಾ” ಕಾರ್ಯಕ್ರಮವಾಗಿದೆ.


ಈ ಕಾರ್ಯಕ್ರಮ ನಿರಂಜನ್ ದೇಶಪಾಂಡೆ ನಿರೂಪಣೆಯಲ್ಲಿ  ಮೂಡಿಬರಲಿದೆ. ಆಟದಲ್ಲಿ ತಾರೆಯರ ತಾಯಿ ಒಂದು ಕಡೆ, ಹೆಂಡತಿ ಒಂದು ಕಡೆ ನಿಂತು ನಿರಂಜನ್ ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾರೆ. ಹನ್ನೆರಡು ಪ್ರಶ್ನೆಗಳಿಂದ ಐದು ಲಕ್ಷ ಗೆಲ್ಲುವ ಅವಕಾಶ ಇವರಿಗೆ ಇರುತ್ತದೆ. ಇದರಲ್ಲಿ ಸರಿಯಾಗಿ ಉತ್ತರ ಕೊಡುವವರು ಯಾರು ಎಂಬ ಆಯ್ಕೆ ಮಾತ್ರ ಬಂದ ತಾರೆಯರದ್ದು. ಉತ್ತರ ತಪ್ಪಾದಲ್ಲಿ ಬರೀ ಒಂದು ಕಡೆಯಿಂದ ಮಾತ್ರವಲ್ಲದೆ, ಆರೋಹಣ ಮತ್ತು ಅವರೋಹಣದ ಕ್ರಮದಲ್ಲಿ ಹಣ ಕಡಿತವಾಗುತ್ತ ಬರುತ್ತದೆ.


ಈಗಾಗಲೇ ಈ ಆಟದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್, ಹಾಸ್ಯ ನಟ ಕುರಿ ಪ್ರತಾಪ್ ಭಾಗವಹಿಸಿದ್ದಾರೆ.  ಈ “ತುತ್ತಾ ಮುತ್ತಾ” ಇದೇ ಶನಿವಾರದಿಂದ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments