Webdunia - Bharat's app for daily news and videos

Install App

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

Sampriya
ಸೋಮವಾರ, 16 ಜೂನ್ 2025 (19:27 IST)
Photo Credit X
ಬೆಂಗಳೂರು: ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ದಿ ರೈಸ್ ಆಫ್ ಅಶೋಕ ಸಿನಿಮಾ ಮುಗಿದೇ ಹೋಯಿತು ಎಂದು ಸುದ್ದಿಯಾಗಿದ್ದ ಸಿನಿಮಾ ಇದೀಗ ಚಿತ್ರೀಕರಣ ಮುಕ್ತಾಯಗೊಂಡಿದೆ. 

ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ‘ಅಶೋಕ ಬ್ಲೇಡ್’ ಸಿನಿಮಾ ನಿಂತೇ ಹೋಯಿತು ಎಂದು ಸುದ್ದಿ ಹರಡಿತ್ತು. ಆದರೆ ನಟ ಸತೀಶ್ ನೀನಾಸಂ ಅವರು ‘ದಿ ರೈಸ್ ಆಫ್ ಅಶೋಕ’ ಹೆಸರಿನಲ್ಲಿ ಆ ಪ್ರಾಜೆಕ್ಟ್​ ಅನ್ನು ಮತ್ತೆ ಕೈಗೆತ್ತಿಕೊಂಡು ಯಶಸ್ವಿಯಾಗಿ ಶೂಟಿಂಗ್ ಮುಗಿಸಿದ್ದಾರೆ. 

ಅಭಿನಯ ಚತುರ ಸತೀಶ್ ನೀನಾಸಂ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ, ಟೈಟಲ್ ಹಾಗೂ ಒಂದಷ್ಟು ಪೋಸ್ಟರ್ ಮೂಲಕವೇ ಕುತೂಹಲ ಹೆಚ್ಚಿಸಿದೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ.

ಸತೀಶ್ ನೀನಾಸಂ ದಿ ರೈಸ್ ಆಫ್ ಅಶೋಕ ಸಿನಿಮಾದಲ್ಲಿ ಕ್ರಾಂತಿಕಾರಿ ಯುವಕನ ಪಾತ್ರ ಪೋಷಣೆ ಮಾಡಿದ್ದಾರೆ. 70ರ ದಶಕದಲ್ಲಿ ನಡೆಯುವ ಕಥೆಯು ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಕುರಿತು ಬೆಳಕು ಚೆಲ್ಲಲಿದೆ
ಈ ಸಿನಿಮಾದಲ್ಲಿ ಸತೀಶ್ ಅವರಿಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಅವರು ಜೋಡಿಯಾಗಿದ್ದಾರೆ. ಬಿ.ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರಿಯಾ ಹಾಗೂ ಯಶ್ ಶೆಟ್ಟಿ, ಡ ಗನ್ ಮಂಜು, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ ತಾರಾಬಳಗದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

‌ಕುರ್ಚಿ ಮಡತಪೆಟ್ಟಿ ಸಾಂಗ್‌ಗೆ ಹೆಜ್ಜೆ ಹಾಕಿ ಸದ್ದು ಮಾಡಿದ್ದ ಶಮ್ನಾ ಕಾಸಿಂ ಕಡೆಯಿಂದ ಗುಡ್‌ನ್ಯೂಸ್‌

BigBoss Season 12: ಕಲರ್ಸ್ ಕನ್ನಡ ಸೀರಿಯಲ್ ನೋಡುಗರಿಗೆ ಇಲ್ಲಿದೆ ಬಿಗ್‌ಚಾನ್ಸ್‌

ಐವಿಎಫ್‌ ಮೂಲಕ ಗರ್ಭದರಿಸಿದ್ದ ಭಾವನೆಗೆ ಹೆರಿಗೆ, ಟ್ವಿನ್ಸ್ ನಿರೀಕ್ಷೆಯಲ್ಲಿದ್ದ ನಟಿಗೆ ಆಘಾತ

ಸೂರ್ಯವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ಇನ್ನಿಲ್ಲ

ಕನ್ನಡಕ್ಕೆ ಮಾಡುವ ತಾರತಮ್ಯದ ಬಗ್ಗೆ ಸೈಮಾ ವೇದಿಕೆಯಲ್ಲೇ ದುನಿಯಾ ವಿಜಯ್ ಖಡಕ್ ವಾರ್ನಿಂಗ್

ಮುಂದಿನ ಸುದ್ದಿ
Show comments