Webdunia - Bharat's app for daily news and videos

Install App

ನಿಶ್ಚಿತಾರ್ಥ ಮುರಿದುಬಿದ್ದ ಕುರಿತು ಮೌನ ಮುರಿದ ರಶ್ಮಿಕಾ ಮಂದಣ್ಣ

Webdunia
ಮಂಗಳವಾರ, 18 ಸೆಪ್ಟಂಬರ್ 2018 (10:46 IST)
ಬೆಂಗಳೂರು : ಕಳೆದ ವರ್ಷ ಎಂಗೇಜ್ ಮೆಂಟ್ ಮಾಡಿಕೊಂಡ ಸ್ಯಾಂಡಲ್ ವುಡ್ ನ ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಇತ್ತೀಚೆಗೆ ಮುರಿದು ಬಿದಿದ್ದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್, ಕಾಮೆಂಟ್ ಮಾಡುವವರಿಗೆ  ನಟಿ ರಶ್ಮಿಕಾ ಇದೀಗ ಸ್ಪಷ್ಟನೆ ನೀಡಿದ್ದಾರೆ.


ಈ ಬಗ್ಗೆ ಇಷ್ಟು ದಿನ ಸೈಲೆಂಟ್ ಆಗಿದ್ದ ನಟಿ‍ ರಶ್ಮಿಕಾ ಇದೀಗ ಫೇಸ್ ಬುಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. “ನಾನು ಇಷ್ಟು ದಿನ ಸೈಲೆಂಟ್ ಆಗಿ ಇರುವುದಕ್ಕೆ ನನ್ನನ್ನು ಕ್ಷಮಿಸಿ. ನಾನು ಸುಮಾರು ದಿನದಿಂದ ಗಮನಿಸುತ್ತಿದ್ದೀನಿ. ನನ್ನ ಬಗ್ಗೆ ಸಾಕಷ್ಟು ಕತೆಗಳು, ಲೇಖನಗಳು, ಕಮೆಂಟ್ಸ್ ಹಾಗೂ ಟ್ರೋಲ್ ಮಾಡುತ್ತಿರುವುದನ್ನು ಗಮನಿಸುತ್ತಿದ್ದೀನಿ. ನೀವು ನನ್ನನ್ನು ಈ ರೀತಿ ತೋರಿಸುವುದನ್ನು ನೋಡಿ ನಾನು ಸಾಕಷ್ಟು ಬೇಸತ್ತಿದ್ದೇನೆ. ಇದಕ್ಕೆ ನಾನು ನಿಮ್ಮನ್ನು ದೂರುವುದಿಲ್ಲ. ಏಕೆಂದರೆ ನೀವು ಇದನ್ನೇ ನಂಬುತ್ತೀರಾ” ಎಂದು ಪೋಸ್ಟ್ ಮಾಡಿದ್ದಾರೆ.


ಹಾಗೇ “ಸದ್ಯ ಚಿತ್ರರಂಗದಲ್ಲಿ ಕೆಲಸ ಮಾಡುವವರನ್ನು ನೆಮ್ಮದಿಯಿಂದ ಕೆಲಸ ಮಾಡಲು ಬಿಡಿ ಎಂದು ಹೇಳುತ್ತಾ ನನ್ನ ಮಾತನ್ನು ಮುಗಿಸುತ್ತೀನಿ. ಅಲ್ಲದೇ ನಾನು ಕನ್ನಡ ಚಿತ್ರಗಳಲ್ಲಿ ನಟಿಸಲು ಮುಂದುವರೆಸುತ್ತೇನೆ. ಯಾವುದೇ ಭಾಷೆಯಾಗಲಿ, ಯಾವುದೇ ಚಿತ್ರರಂಗ ಆಗಲಿ ನಾನು ನನ್ನ ಬೆಸ್ಟ್ ಶಾಟ್ ನೀಡುತ್ತೇನೆ. ನಾನು ಇಲ್ಲೇ ಇರಲು ಬಂದಿದ್ದೇನೆ. ಧನ್ಯವಾದಗಳು” ಎಂದು ರಶ್ಮಿಕಾ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments