Select Your Language

Notifications

webdunia
webdunia
webdunia
webdunia

ಬೇರೆ ಜೈಲಿಗೆ ಶಿಫ್ಟ್ ಮಾಡದಂತೆ ಕಣ್ಣೀರು ಹಾಕಿದ ದರ್ಶನ್ ಗ್ಯಾಂಗ್‌ನ ಮೂವರು

darshan

Sampriya

ಬೆಂಗಳೂರು , ಬುಧವಾರ, 28 ಆಗಸ್ಟ್ 2024 (18:13 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪ್ರದೋಶ್, ನಾಗರಾಜ್ ಮತ್ತು ಲಕ್ಷ್ಮಣ್ ಅವರು ಜಡ್ಜ್ ಮುಂದೆ ಕಣ್ಣೀರು ಹಾಕಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಗ್ಯಾಂಗ್‌ಗೆ ರಾಜ್ಯಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆಗುತ್ತಿದ್ದ ಹಾಗೇ ಸರ್ಕಾರ  ಕಠಿಣ ಕ್ರಮಕ್ಕೆ ಸೂಚಿಸಿತ್ತು. ಅದರಂತೆ ಪೊಲೀಸರು ಮೂರು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.

ಇದೀಗ ರೇಣುಕಾಸ್ವಾಮಿ ಪ್ರಕರಣ ಡಿಗ್ಯಾಂಗ್‌ ಅನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಲಾಗಿದೆ. ಅದರಂತೆ ದರ್ಶನ್ ಅವರನ್ನು ಬಳ್ಳಾರಿಗೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಇದೀಗ ಪ್ರಕರಣದ ಆರೋಪಿಗಳಾದ ಪ್ರದೋಶ್, ನಾಗರಾಜ್ ಮತ್ತು ಲಕ್ಷ್ಮಣ್ ಅವರು ಬೇರೆ ಜೈಲಿಗೆ ಶಿಫ್ಟ್ ಮಾಡಬೇಡಿ ಎಂದು ಜಡ್ಜ್ ಮುಂದೆ ಕಣ್ಣೀರು ಹಾಕಿದ್ದಾರೆ.

ಎ14 ಆರೋಪಿ ಪ್ರದೋಶ್ ಜಡ್ಜ್‌ ಮುಂದೆ ಮನವಿ ಮಾಡಿಕೊಂಡಿದ್ದಾರೆ. ನನ್ನ ತಂದೆಗೆ ಕ್ಯಾನ್ಸರ್‌ ಇದೆ ದಯವಿಟ್ಟು ನನ್ನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಾಮೀನು ಅರ್ಜಿ ವಿಚಾರಣೆ ಅಂತ್ಯ: ಪವಿತ್ರ ಗೌಡ ಭವಿಷ್ಯ ಆ.31ಕ್ಕೆ ನಿರ್ಧಾರ