Webdunia - Bharat's app for daily news and videos

Install App

ರೇಣುಕಾಸ್ವಾಮಿ ಪ್ರಕರಣದಲ್ಲಿ ಇನ್ನೂ ಬಿಡುಗಡೆ ಭಾಗ್ಯದ ಸಿಗದ ಆರೋಪಿಗಳು ಇವರೇ

Sampriya
ಶುಕ್ರವಾರ, 13 ಡಿಸೆಂಬರ್ 2024 (19:42 IST)
Photo Courtesy X
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು 7 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಇನ್ನೂ 6 ಆರೋಪಿಗಳಿಗೆ ಜೈಲೇ ಗತಿಯಾಗಿದೆ.

ಪ್ರಕರಣ ಸಂಬಂಧ ಇಂದು ನಟ ದರ್ಶನ್, ಪವಿತ್ರಾ ಗೌಡ, ಆರ್‌. ನಾಗರಾಜು, ಎಂ.ಲಕ್ಷ್ಮಣ್‌, ಅನು ಕುಮಾರ್‌ ಅಲಿಯಾಸ್, ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್‌ ರಾವ್ ಅವರು ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಬಿಗ್‌ ರಿಲೀಫ್ ಸಿಕ್ಕಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮಧ್ಯಾಹ್ನ ತೀರ್ಪು ಪ್ರಕಟಿಸಿದೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್‌, ಪವಿತ್ರಾ ಗೌಡ ಸೇರಿ ಒಟ್ಟು 17 ಆರೋಪಿಗಳು ಜೈಲು ಸೇರಿದ್ದರು. ಇನ್ನೂ ಪ್ರಕರಣದ ಆರೋಪಿಯಾದ ಕೇಶವಮೂರ್ತಿಗೆ ಸೆಪ್ಟೆಂಬರ್‌ 24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದೇ ದಿನ 15 ಹಾಗೂ 17ನೇ ಆರೋಪಿಗಳಾದ ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ಅವರಿಗೆ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಆದರೆ 17ಆರೋಪಿಗಳಲ್ಲಿ ಇನ್ನು ಹಲವರು ಜಾಮೀನು ಸಿಗದೆ ಜೈಲಿನಲ್ಲಿಯೇ ಇದ್ದಾರೆ.  ಪ್ರಕರಣದ ಮೂರನೇ ಆರೋಪಿಯಾದ ಪವನ್ ಕೆ. ಅಲಿಯಾಸ್‌ ಪುಟ್ಟಸ್ವಾಮಿ, 4ನೇ ಆರೋಪಿ ರಾಘವೇಂದ್ರ ಅಲಿಯಾಸ್‌ ನಾಗರಾಜ್, 8ನೇ ಆರೋಪಿ ರವಿಶಂಕರ್ ಅಲಿಯಾಸ್‌ ರವಿ 9ನೇ ಆರೋಪಿ ಧನರಾಜ್‌ ಅಲಿಯಾಸ್‌ ರಾಜು, 10ನೇ ಆರೋಪಿ ವಿನಯ್ ಅಲಿಯಾಸ್‌ ವೆಂಕಟರೆಡ್ಡಿ, 13ನೇ ಆರೋಪಿ ದೀಪಕ್‌ ಅವರಿಗೆ ಜಾಮೀನು ಸಿಕ್ಕಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments