Webdunia - Bharat's app for daily news and videos

Install App

ಕೆ.ಮಂಜು ಅವರ 'ಪಡ್ಡೆ ಹುಲಿ' ಚಿತ್ರಕ್ಕೆ ಈ ನಟನೇ ಸ್ಪೂರ್ತಿಯಂತೆ!

Webdunia
ಬುಧವಾರ, 14 ಮಾರ್ಚ್ 2018 (06:43 IST)
ಬೆಂಗಳೂರು : ಇತ್ತಿಚೆಗಷ್ಟೇ ‘ಪಡ್ಡೆಹುಲಿ’ ಚಿತ್ರದ ಮುಹೂರ್ತ ಸಮಾರಂಭ ನೆರೆವೇರಿದ್ದು, ಈ ಸಂದರ್ಭದಲ್ಲಿ ಚಿತ್ರಕ್ಕೆ ಕಥೆ ಬರೆದ ನಿರ್ಮಾಪಕ ಕೆ.ಮಂಜು ಅವರು ಈ ಕಥೆ ಬರೆಯಲು ಸ್ಪೂರ್ತಿ ಯಾರೆಂಬುದನ್ನು ತಿಳಿಸಿದ್ದಾರೆ.


ನಿರ್ಮಾಪಕ ಕೆ.ಮಂಜು ಅವರು ‘ಪಡ್ಡೆಹುಲಿ’ ಚಿತ್ರದ ಕಥೆ ಬರೆಯಲು ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರೇ ಸ್ಪೂರ್ತಿಯಂತೆ. ಈ ಕುರಿತು ಮಾತನಾಡಿದ ಅವರು,’ ನಾನು ವಿಷ್ಣುವರ್ಧನ್ ಅವರ ಜೊತೆಗೆ ಸಾಕಷ್ಟು ಸಮಯ ಕಳೆದಿದ್ದೇನೆ. ಅವರು ನನಗೆ ತಮ್ಮ ಬಗ್ಗೆ, ತಾವು ಬೆಳೆದು ಬಂದ ಬಗ್ಗೆ ಹಲವು ವಿಷಯಗಳನ್ನು ಹೇಳಿದ್ದಾರೆ. ತಾವು ಕಷ್ಟಪಟ್ಟ ದಿನಗಳ ಬಗ್ಗೆಯೂ ಹೇಳಿದ್ದಾರೆ. ಅವರಿಂದ ಸ್ಫೂರ್ತಿ ಪಡೆದು, ಕಥೆಯನ್ನು ಬರೆದಿದ್ದೇನೆ' ಎಂದು ಹೇಳಿದ್ದಾರೆ.


ನಿರ್ದೇಶಕ ಗುರು ದೇಶಪಾಂಡೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರು ನಾಯಕನಾಗಿ ನಟಿಸಲಿದ್ದು, ಅವರಿಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ನಟಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments