Webdunia - Bharat's app for daily news and videos

Install App

ದೇವರ ಸಿನಿಮಾಗೆ ಇದೆಂಥಾ ಅಪಶಕುನ: ಸುಟ್ಟು ಭಸ್ಮವಾಯಿತು ಜೂ.ಎನ್‌ಟಿಆರ್ ಬಿಗ್ ಕಟೌಟ್

Sampriya
ಶುಕ್ರವಾರ, 27 ಸೆಪ್ಟಂಬರ್ 2024 (15:38 IST)
Photo Courtesy X
ಹೈದರಾಬಾದ್: ಆರ್‌ಆರ್‌ಆರ್‌ ಬಳಿಕ ಜೂನಿಯರ್ ಎನ್‌ಟಿಆರ್ ಅಭಿನಯಿಸಿದ ದೇವರ ಸಿನಿಮಾ ಇಂದು ಭರ್ಜರಿ ಓಪನಿಂಗ್ಸ್‌ ಸಿಕ್ಕಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ಇದೀಗ ಸಿನಿಮಾ ಬಿಡುಗಡೆ ಹಿನ್ನೆಲೆ ಹೈದರಾಬಾದ್ ನ ಸುದರ್ಶನ್ ಚಿತ್ರ ಮಂದಿರದಲ್ಲಿ ನಿರ್ಮಿಸಲಾಗಿದ್ದ ಜೂ.ಎನ್ ಟಿಆರ್ ಕಟೌಟ್ ಬೆಂಕಿಗಾಹುತಿಯಾಗಿದೆ.

ಹೈದರಾಬಾದ್‌ನ ಸುದರ್ಶನ್ 35 ಎಂಎಂ ಥಿಯೇಟರ್‌ನಲ್ಲಿ ದೇವರ ಚಿತ್ರ ಬಿಡುಗಡೆಯಾಗಿದ್ದು, ಚಿತ್ರಮಂದಿರದ ಮುಂದೆ ನೆರೆದಿದ್ದ ಸಾವಿರಾರು ಎನ್‌ಟಿಆರ್ ಅಭಿಮಾನಿಗಳು ಸಂಭ್ರಮಸಿದ್ದಾರೆ.

ಅಭಿಮಾನಿಗಳು ಪಟಾಗಿ ಸಿಡಿಸುವ ವೇಳೆ ಬೆಂಕಿಯ ಕಿಡಿ ಕಟೌಟ್ ಗೆ ತಗುಲಿದ್ದು, ಕ್ಷಣಮಾತ್ರದಲ್ಲಿ ಇಡೀ ಕಟೌಟ್ ಸುಟ್ಟು ಕರಕಲಾಗಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಆಗಬಹುದಾಗಿದ್ದ ದೊಡ್ಡ ಪ್ರಮಾದ ತಪ್ಪಿಸಿದ್ದಾರೆ.

ಸಿನಿಮಾಗೆ ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾ ನೋಡಿದ ಮಂದಿ ಜೂನಿಯರ್ ಎನ್‌ಟಿಆರ್ ಅಭಿನಯಕ್ಕೆ ಫಿದಾ ಆಗಿದ್ದಾರೆ. ಈಗಾಗಲೇ ಎಲ್ಲ ಚಿತ್ರಮಂದಿರಗಳಲ್ಲಿ ಸೋಲ್ಡೌಟ್ ಆಗಿವೆ. ಸಿನಿಮಾ ಸೂಪರ್ ಹಿಟ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಈ ಚಿತ್ರದಲ್ಲಿ ಜೂ.ಎನ್‌ಟಿಆರ್‌ಗೆ ಜೋಡಿಯಾಗಿ ಬಾಲಿವುಡ್ ನಟಿ ಜಾನ್ವಿ ಅಭಿನಯಿಸಿದ್ದಾರೆ. ಅದಲ್ಲದೆ ಬಾಲಿವುಡ್ ಹೀರೋ ಸೈಫ್ ಅಲಿ ಖಾನ್ ನೆಗೆಟಿವ್ ಪಾತ್ರದಲ್ಲಿ ನಟಿಸಿದ್ದು, ನಟರಾದ ಪ್ರಕಾಶ್ ರಾಜ್, ಶ್ರೀಕಾಂತ್ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments