Select Your Language

Notifications

webdunia
webdunia
webdunia
webdunia

ಹರಿಪ್ರಿಯಾರ ಈ ಮಾನವೀಯತೆ ಗುಣಕ್ಕೆ ಯಾರೆಯಾದ್ರು ಸೆಲ್ಯೂಟ್ ಹೊಡೆಯಲೇ ಬೇಕು

ಹರಿಪ್ರಿಯಾರ ಈ ಮಾನವೀಯತೆ ಗುಣಕ್ಕೆ ಯಾರೆಯಾದ್ರು ಸೆಲ್ಯೂಟ್ ಹೊಡೆಯಲೇ ಬೇಕು
ಬೆಂಗಳೂರು , ಶುಕ್ರವಾರ, 15 ಜೂನ್ 2018 (10:01 IST)
ಬೆಂಗಳೂರು :  ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರು ರಕ್ತದಾನ ಮಾಡುವುದರ ಮೂಲಕ ಮೂರು ಜೀವಗಳನ್ನು ಉಳಿಸಿ ಮಾನವೀಯತೆ ಮೆರೆದಿದ್ದಾರೆ.


ಹೆರಿಗೆಯ ಸಮಯದಲ್ಲಿ ಗರ್ಭಿಣಿಯೊಬ್ಬಳು ರಕ್ತದ ಕೊರತೆಯಿಂದ ನರಳುತ್ತಿದ್ದು, ಈ ವಿಷಯವನ್ನು ಟ್ವೀಟರ್ ನಲ್ಲಿ ತಿಳಿದುಕೊಂಡ ನಟಿ ಹರಿಪ್ರಿಯಾ ಅವರು ತಕ್ಷಣ ಆಸ್ಪತ್ರೆಗೆ ಧಾವಿಸಿ ಬಂದು ರಕ್ತ ನೀಡುವುದರ ಮೂಲಕ ಆ ತಾಯಿ ಜೀವವನ್ನು ಉಳಿಸಿದ್ದಾರೆ. ನಂತರ ಆ ತಾಯಿ  ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರು ಮೂರು ಜೀವಗಳ ರಕ್ಷಣೆ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಹರಿಪ್ರಿಯಾ ಅವರು, ’ಇಂದು ಸಾರ್ಥಕತೆಯ ಮನೋಭಾವ ಮೂಡಿದೆ. ಆ ಪುಟ್ಟ ಮಕ್ಕಳನ್ನು ನೋಡಿ ಖುಷಿಯಾಗಿದೆ. ರಕ್ತದಾನ ಮಾಡುವಂತೆ ಎಲ್ಲರಿಗೂ ಪ್ರೋತ್ಸಾಹ ನೀಡಿ. ಅದರಿಂದ ಒಂದು ಜೀವ ಉಳಿಸಬಹುದು’ ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಮೇರಿಕಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಟಾಲಿವುಡ್ ನಿರ್ಮಾಪಕ ದಂಪತಿಗಳು ಅರೆಸ್ಟ್