Select Your Language

Notifications

webdunia
webdunia
webdunia
webdunia

ಜೈಲು ಸಿಬ್ಬಂದಿ ಬಳಿ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಕೇಳಿ ದರ್ಶನ್ ಮಾಡಿದ ಪ್ರತಿಜ್ಞೆಯೇನು ಗೊತ್ತಾ

Darshan

Krishnaveni K

ಬಳ್ಳಾರಿ , ಗುರುವಾರ, 19 ಸೆಪ್ಟಂಬರ್ 2024 (14:49 IST)
ಬಳ್ಳಾರಿ: ಹತ್ಯೆ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಈಗ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಜೈಲು ಸಿಬ್ಬಂದಿಗಳ ಬಳಿ ಕೇಳಿ ತಿಳಿದುಕೊಂಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಈಗಾಗಲೇ 100 ದಿನಗಳ ಜೈಲು ವಾಸ ಅನುಭವಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸದ್ಯದಲ್ಲೇ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಈ ನಡುವೆ ಅವರು ರೇಣುಕಾಸ್ವಾಮಿ ಕುಟುಂಬದ ಬಗ್ಗೆಯೂ ಕೇಳಿ ತಿಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಜೈಲು ಸಿಬ್ಬಂದಿಗಳ ಬಳಿ ಪಶ್ಚಾತ್ತಾಪದ ಮಾತುಗಳನ್ನಾಡುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬದ ಸ್ಥಿತಿ ಗತಿ ಬಗ್ಗೆ ಕೇಳಿದ್ದು, ಇಲ್ಲಿಂದ ಹೊರಗಡೆ ಹೋದ ತಕ್ಷಣ ರೇಣುಕಾ ಕುಟುಂಬಸ್ಥರನ್ನು ಭೇಟಿ ಮಾಡಿ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಪ್ರತಿಜ್ಞೆ ಹೇಳಿಕೊಂಡಿದ್ದಾರಂತೆ.

ಪತ್ನಿ ವಿಜಯಲಕ್ಷ್ಮಿ ಬಳಿಯೂ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಕೇಳಿ ತಿಳಿದುಕೊಂಡಿದ್ದಾರೆ ಎನ್ನಲಾಗಿದೆ. ನಾನು ಕೊಲೆ ಮಾಡಿಲ್ಲ. ಎಲ್ಲಾ ದೇವರು ನೋಡಿಕೊಳ್ಳುತ್ತಾನೆ ಎಂದು ಜೈಲು ಸಿಬ್ಬಂದಿಗಳ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ದರ್ಶನ್ ದೈಹಿಕವಾಗಿಯೂ ತೀರಾ ಇಳಿದುಹೋಗಿದ್ದು, ಹೊರಗಡೆ ಬಂದರೆ ಸಾಕು ಎನ್ನುವ ಮನಸ್ಥಿತಿಯಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೈಲು ಸಿಬ್ಬಂದಿ ಬಳಿ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಕೇಳಿ ದರ್ಶನ್ ಮಾಡಿದ ಪ್ರತಿಜ್ಞೆಯೇನು ಗೊತ್ತಾ