Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

Sampriya
ಗುರುವಾರ, 24 ಜುಲೈ 2025 (17:04 IST)
ನವದೆಹಲಿ: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್ ಸೇರಿದಂತೆ ಎಲ್ಲರ ಭವಿಷ್ಯ ಇದೀಗ ಸುಪ್ರೀಂ ಕೋರ್ಟ್‌ ಮೇಲಿದೆ. 

ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇಂದು ಅದರ ವಿಚಾರಣೆ ನಡೆದಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. 

ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ದರ್ಶನ್ ಹಾಗೂ ಪವಿತ್ರಾ ಗೌಡ ಲಿವಿಂಗ್ ರಿಲೇಷನ್‌ನಲ್ಲಿದ್ದರು ಎಂದು ಹೇಳಿದ್ದಾರೆ. 

ದರ್ಶನ್ ಹಾಗೂ ಪವಿತ್ರಾ ಗೌಡ ಲಿವಿಂಗ್ ರಿಲೇಷನ್‌ನಲ್ಲಿದ್ದರು. ಹೀಗಾಗಿ ರೇಣುಕಾಸ್ವಾಮಿ ಅಸಭ್ಯವಾಗಿ ಪವಿತ್ರಾ ಗೌಡ ಮೆಸೇಜ್ ಕಳುಹಿಸಿದ್ದ. ಈ ವಿಚಾರ ತಿಳಿದು ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನ ಬಳಸಿಕೊಂಡು ಹತ್ಯೆ ಮಾಡಿದ್ದಾರೆ ಅಂತ ಸರ್ಕಾರದ ಪರ ವಕೀಲ ಸಿದ್ಧಾರ್ಥ್‌ ಲೂಥ್ರಾ ಪ್ರಬಲ ವಾದ ಮಂಡಿಸಿದರು.

ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠದಲ್ಲಿ ನಡೆಸಿತು. ಈ ವೇಳೆ ಸುಮಾರು 1 ಗಂಟೆ ಪ್ರಬಲ ವಾದ ಮಂಡಿಸಿದ ಸಿದ್ಧಾರ್ಥ್‌ ಲೂಥ್ರಾ ಅವರು ಹಲವು ವಿಷಯಗಳನ್ನ ಕೋರ್ಟ್‌ ಗಮನಕ್ಕೆ ತಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments