Webdunia - Bharat's app for daily news and videos

Install App

ದರ್ಶನ್ ಸಂಬಂಧಿ ಎಂದು ಪರಪ್ಪನ ಅಗ್ರಹಾರ ಜೈಲಿಗೆ ಮಾರುವೇಷದಲ್ಲಿ ಬಂದಿದ್ದು ಈ ಸ್ಯಾಂಡಲ್ ವುಡ್ ನಟಿ

Krishnaveni K
ಶನಿವಾರ, 29 ಜೂನ್ 2024 (10:57 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ರನ್ನು ನೋಡಲು ಸಂಬಂಧಿ ಎಂದುಕೊಂಡು ಯುವತಿಯೊಬ್ಬಳು ನಿನ್ನೆ ಜೈಲಿಗೆ ಬಂದಿದ್ದು ಎಲ್ಲರ ಗಮನ ಸೆಳೆದಿತ್ತು. ಈ ಯುವತಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ನೆಟ್ಟಿಗರಿಗೆ ಅನುಮಾನವೊಂದು ಬಂದಿದೆ.

ಸ್ವತಃ ಕಾರು ಚಲಾಯಿಸಿಕೊಂಡು ಬಂದಿದ್ದ ಯುವತಿ ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದರು. ಮಾಧ್ಯಮಗಳು ಪ್ರಶ್ನಿಸಿದಾಗ ನಾನು ದರ್ಶನ್ ಸಂಬಂಧಿ. ಅವರನ್ನು ನೋಡಲು ಬಂದಿದ್ದೇನೆ. ಆದರೆ ಪೊಲೀಸರು ಬಿಡುತ್ತಿಲ್ಲ ಎಂದಿದ್ದರು. ಈ ಯುವತಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನು ಗಮನಿಸಿದ ನೆಟ್ಟಿಗರು ಈಕೆ ಸ್ಯಾಂಡಲ್ ವುಡ್ ನಟಿ, ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸೋನಲ್ ಮೊಂಟಾರಿಯೊ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆಕೆಯ ಮುಖ ಸೂಕ್ಷ್ಮವಾಗಿ ಗಮನಿಸಿದರೆ ನೆಟ್ಟಿಗರ ಅನುಮಾನ ನಿಜವೆನಿಸುತ್ತಿದೆ.

ಇತ್ತೀಚೆಗೆ ಸೋನಲ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಲ್ಲದೆ, ಸೋನಲ್ ದರ್ಶನ್ ಆಪ್ತವಲಯಲದಲ್ಲಿ ಗುರುತಿಸಿಕೊಂಡಿದ್ದರು. ಈ ಕಾರಣಕ್ಕೆ ದರ್ಶನ್ ರನ್ನು ನೋಡಲು, ಮಾಧ್ಯಮಗಳ ಕಣ್ಣಿನಿಂದ ಮರೆ ಮಾಚಲು ಈ ರೀತಿ ಮಾಸ್ಕ್ ಹಾಕಿ ಮುಖಭಾವ ಗುರುತು ಸಿಗದಂತೆ ಜೈಲಿಗೆ ಬಂದಿದ್ದರಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments