Select Your Language

Notifications

webdunia
webdunia
webdunia
webdunia

ದರ್ಶನ್ ಮತ್ತು ಗ್ಯಾಂಗ್ ಬೇರೆ ಜೈಲಿಗೆ: ಇಂದು ಕೋರ್ಟ್ ತೀರ್ಮಾನ

Darshan

Krishnaveni K

ಬೆಂಗಳೂರು , ಸೋಮವಾರ, 24 ಜೂನ್ 2024 (09:56 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೀಡಾಗಿರುವ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ವರ್ಗಾಯಿಸುವ ಕುರಿತಂತೆ ಇಂದು ಕೋರ್ಟ್ ತನ್ನ ತೀರ್ಮಾನ ಪ್ರಕಟಿಸಲಿದೆ.

ಭದ್ರತೆ ಮತ್ತು ಆರೋಪಿಗಳು ಪಿತೂರಿ ಮಾಡುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಆರೋಪಿಗಳನ್ನು ಒಂದೇ ಜೈಲಿನಲ್ಲಿ ಇರಿಸುವುದು ಬೇಡ ಎಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಆರೋಪಿಗಳ ಪರ ಲಾಯರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸೋಮವಾರ ತೀರ್ಪು ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿತ್ತು.

ಅದರಂತೆ ಇಂದು ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಮಹತ್ವದ ದಿನವಾಗಿರಲಿದೆ. ಈಗಾಗಲೇ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನಲ್ಲಿದ್ದಾರೆ.  ಎಲ್ಲಾ ಆರೋಪಿಗಳನ್ನೂ ಪ್ರತ್ಯೇಕವಾಗಿರಿಸಲಾಗಿದೆ.

ಈ ಎಲ್ಲಾ ಆರೋಪಿಗಳೂ ಒಟ್ಟಿಗೇ ಇದ್ದರೆ ಪಿತೂರಿ ನಡೆಸಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ಈಗ ನಿರ್ಣಾಯಕ ಹಂತದಲ್ಲಿದ್ದು, ಈ ಹಂತದಲ್ಲಿ ಆರೋಪಿಗಳಿಗೆ ಪರಸ್ಪರ ಚರ್ಚೆಗೆ ಅವಕಾಶ ಕೊಡಬಾರದು ಎಂಬ ಕಾರಣಕ್ಕೆ ಬೇರೆ ಜೈಲಿಗೆ ವರ್ಗಾಯಿಸಲು ಅವಕಾಶ ಕೋರಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್‌ನಲ್ಲಿ ಬಂಪರ್ ಆಫರ್ ಗಿಟ್ಟಿಸಿಕೊಂಡ ನಟಿ ಸಮಂತಾ