ದರ್ಶನ್ ಮತ್ತು ಗ್ಯಾಂಗ್ ಬೇರೆ ಜೈಲಿಗೆ: ಇಂದು ಕೋರ್ಟ್ ತೀರ್ಮಾನ

Krishnaveni K
ಸೋಮವಾರ, 24 ಜೂನ್ 2024 (09:56 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೀಡಾಗಿರುವ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ವರ್ಗಾಯಿಸುವ ಕುರಿತಂತೆ ಇಂದು ಕೋರ್ಟ್ ತನ್ನ ತೀರ್ಮಾನ ಪ್ರಕಟಿಸಲಿದೆ.

ಭದ್ರತೆ ಮತ್ತು ಆರೋಪಿಗಳು ಪಿತೂರಿ ಮಾಡುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಆರೋಪಿಗಳನ್ನು ಒಂದೇ ಜೈಲಿನಲ್ಲಿ ಇರಿಸುವುದು ಬೇಡ ಎಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಆರೋಪಿಗಳ ಪರ ಲಾಯರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸೋಮವಾರ ತೀರ್ಪು ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿತ್ತು.

ಅದರಂತೆ ಇಂದು ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಮಹತ್ವದ ದಿನವಾಗಿರಲಿದೆ. ಈಗಾಗಲೇ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನಲ್ಲಿದ್ದಾರೆ.  ಎಲ್ಲಾ ಆರೋಪಿಗಳನ್ನೂ ಪ್ರತ್ಯೇಕವಾಗಿರಿಸಲಾಗಿದೆ.

ಈ ಎಲ್ಲಾ ಆರೋಪಿಗಳೂ ಒಟ್ಟಿಗೇ ಇದ್ದರೆ ಪಿತೂರಿ ನಡೆಸಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ಈಗ ನಿರ್ಣಾಯಕ ಹಂತದಲ್ಲಿದ್ದು, ಈ ಹಂತದಲ್ಲಿ ಆರೋಪಿಗಳಿಗೆ ಪರಸ್ಪರ ಚರ್ಚೆಗೆ ಅವಕಾಶ ಕೊಡಬಾರದು ಎಂಬ ಕಾರಣಕ್ಕೆ ಬೇರೆ ಜೈಲಿಗೆ ವರ್ಗಾಯಿಸಲು ಅವಕಾಶ ಕೋರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments