Select Your Language

Notifications

webdunia
webdunia
webdunia
webdunia

ತುಳು ಹಾಗೂ ಕನ್ನಡ ಚಿತ್ರನಟ ಸದಾಶಿವ ಸಾಲ್ಯಾನ್ ಇನ್ನಿಲ್ಲ

ತುಳು ಹಾಗೂ ಕನ್ನಡ ಚಿತ್ರನಟ ಸದಾಶಿವ ಸಾಲ್ಯಾನ್ ಇನ್ನಿಲ್ಲ
ಬೆಂಗಳೂರು , ಮಂಗಳವಾರ, 10 ಜುಲೈ 2018 (07:56 IST)
ಮುಂಬೈ : ಹಿರಿಯ ತುಳು ಹಾಗೂ ಕನ್ನಡ ಚಿತ್ರನಟ ಉಡುಪಿ ಮೂಲದ ಸದಾಶಿವ ಸಾಲ್ಯಾನ್(68) ಭಾನುವಾರ ಮುಂಬೈ ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


ಮೂಲತಃ ಉಡುಪಿಯ ತೆಂಕ ಎರ್ಮಾಳ್‌ ನವರಾಗಿದ್ದ ಸದಾಶಿವ ಸಾಲ್ಯಾನ್ ಚಿಕ್ಕ ವಯಸ್ಸಿನಲ್ಲೇ ಮುಂಬೈಗೆ ತೆರಳಿ ಅಲ್ಲೇ ನೆಲೆಸಿದ್ದರು. ಅಲ್ಲಿ ಪದವಿ ಶಿಕ್ಷಣ ಮುಗಿಸಿದ್ದ ಅವರು ಮುಂಬೈ ಸೆಂಟ್ರಲ್ ಬ್ಯಾಂಕ್ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ಮುಂಬೈಯ ನಾಟಕ ರಂಗದಲ್ಲಿ ಬೆಳೆದು ನಂತರ ಸಾಲ್ಯಾನ್ ಅವರು ಭಾಗ್ಯವಂತೆದಿ, ಬದ್ಕೆರೆಬುಡ್ಲೆ, ಪೆಟ್ಟಾಯಿ ಪಿಲಿ, ಸತ್ಯ ಓಲುಂಡು, ದಾರೆದ ಸೀರೆ, ಸಮರ ಸಿಂಹ, ಅನಾಥ ರಕ್ಷಕ, ಸಿಡಿದೆದ್ದ ಪಾಂಡವರು, ಕಾಲೆೇಜು ರಂಗ, ಉತ್ತರ ಧ್ರುವದಿಂದ ದಕ್ಷಿಣ ಧ್ರುವಕ್ಕೂ ಮೊದಲಾದ 50 ತುಳು ಮತ್ತು ಕನ್ನಡ ಚಲನಚಿತ್ರಗಳಲ್ಲಿ ನಟಿಸಿ ಆ ಮೂಲಕ ಸುಮಾರು 50 ಚಿತ್ರಗಳಲ್ಲಿ ನಟಿಸಿದ ಏಕೈಕ ಮುಂಬೈ ರಂಗ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೂನಂ ಪಾಂಡೆ ಪ್ರಕಾರ ಆಕೆ ನಂತರ ಬಿಕಿನಿಯಲ್ಲಿ ಸೆಕ್ಸಿಯಾಗಿ ಕಾಣುವ ಹುಡುಗಿ ಯಾರಂತೆ ಗೊತ್ತಾ?