Webdunia - Bharat's app for daily news and videos

Install App

ಶೃತಿ ಬೆನ್ನ ಹಿಂದೆ ಇಬ್ಬರು ಕನ್ನಡದ ನಟರು ನಿಂತಿದ್ದಾರೆ- ಪ್ರಶಾಂತ್ ಸಿಂಬರ್ಗಿಯಿಂದ ಸ್ಫೋಟಕ ಮಾಹಿತಿ

Webdunia
ಶುಕ್ರವಾರ, 26 ಅಕ್ಟೋಬರ್ 2018 (07:04 IST)
ಬೆಂಗಳೂರು : ನಟ ಅರ್ಜುನ್ ಸರ್ಜಾ ಅವರ ಮೇಲೆ ನಟಿ ಶೃತಿ ಹರಿಹರನ್ ಮಾಡಿರುವ ಮೀಟೂ ಆರೋಪದ ಬಗ್ಗೆ ದಿನದಿನೇ ಸ್ಫೋಟಕ ಮಾಹಿತಿಗಳು ಕೇಳಿಬರುತ್ತಿದ್ದು, ಇದೀಗ ಅರ್ಜುನ್ ಸರ್ಜಾರ ವಕೀಲ, ಆಪ್ತ ಪ್ರಶಾಂತ್ ಸಿಂಬರ್ಗಿ ಹೊಸ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.


ಫಿಲ್ಮ್ ಚೇಂಬರ್ ನಲ್ಲಿ ನಡೆದ ಸಂಧಾನ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಶಾಂತ್ ಸಿಂಬರ್ಗಿ, ‘ಶೃತಿ ಹರಿಹರನ್ ಬೆನ್ನ ಹಿಂದೆ ಇಬ್ಬರು ಕನ್ನಡದ ನಟರು ನಿಂತಿದ್ದು, ಎಲ್ಲದಕ್ಕೂ ಅವರೇ ಸೂತ್ರಧಾರರು ಎಂಬ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.


‘ಶೃತಿ ಹರಿಹರನ್ ವಿರುದ್ಧ ಎಫ್‍ಐ ಆರ್ ದಾಖಲು ಮಾಡಿದ್ದೇವೆ. ಶೃತಿ ಹರಿಹರನ್ ವಿದೇಶದಲ್ಲಿಯ ಮಾಧ್ಯಮಗಳಿಗೆ ಹಣ ಕೊಟ್ಟು ಅರ್ಜುನ್ ಸರ್ಜಾರ ವಿರೋಧವಾಗಿ ತೋರಿಸಿದ್ದಾರೆ. ನ್ಯೂಯಾರ್ಕ್ ಸೇರಿದಂತೆ ಇತರೆ ದೇಶಗಳ ಮಾಧ್ಯಮಗಳಲ್ಲಿ ಅರ್ಜುನ್ ಸರ್ಜಾ ಮತ್ತು ಕುಟುಂಬದ ಬಗ್ಗೆ ಕೆಟ್ಟದಾಗಿ ತೋರಿಸುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.


‘ಈಗಾಗಲೇ 400 ಪುಟಗಳ ದೂರನ್ನು ಪೊಲೀಸ್ ಕಮೀಷನರ್ ಗೆ ಸಲ್ಲಿಸಿದ್ದೇವೆ. ಅಧಿಕಾರಿಗಳು ಪ್ರಕರಣವನ್ನು ಸೈಬರ್ ಕ್ರೈಂಗೆ ವರ್ಗಾಯಿಸಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾದ ಸುದ್ದಿಗಳ ಸ್ಕ್ರೀನ್ ಶಾಟ್, ಯುಆರ್‍ಎಲ್ ಎಲ್ಲವೂ ನಮ್ಮ ಬಳಿ ಲಭ್ಯವಿದೆ. ಈ ಮಾಧ್ಯಮಗಳಿಗೆ ಬ್ಯಾಂಕ್ ಖಾತೆಯ ಮೂಲಕ ಹಣ ವರ್ಗಾವಣೆ ಆಗಿದ್ದು, ಅದು ಯಾರ ಅಕೌಂಟ್ ಎಂಬುವುದರ ಬಗ್ಗೆ ನಮಗೆ ಗೊತ್ತಿದೆ. ಒಬ್ಬ ನಟನ ಖಾತೆಯಿಂದ ನೇರವಾಗಿ ಹಣ ವರ್ಗಾವಣೆ ಆಗಿದೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments