Webdunia - Bharat's app for daily news and videos

Install App

ದೊಡ್ಮನೆಯಿಂದ ಹೊರಬರುತ್ತಿದ್ದಂತೆ ಉಗ್ರಂ ಮಂಜುಗೆ ಕಂಕಣ ಭಾಗ್ಯ: ಬಿಗ್‌ಬಾಸ್‌ ಮನೆಯಲ್ಲಿ ಗುರೂಜಿ ಹೇಳಿದ್ದೇನು

Sampriya
ಬುಧವಾರ, 22 ಜನವರಿ 2025 (14:52 IST)
Photo Courtesy X
ಬೆಂಗಳೂರು: ಕನ್ನಡದ ಬಿಗ್‌ಬಾಸ್‌ ಫಿನಾಲೆ ವಾರ ನಡೆಯುತ್ತಿದೆ. ದೊಡ್ಮನೆಯಲ್ಲಿ ಉಳಿದಿರುವ ಕೊನೆಯ ಆರು ಸ್ಪರ್ಧಿಗಳು ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದಾರೆ.

ಉಗ್ರಂ ಮಂಜು, ತ್ರಿವಿಕ್ರಮ್‌, ಭವ್ಯಾ ಗೌಡ, ಮೋಕ್ಷಿತಾ, ಹನುಮಂತ, ರಜತ್‌  ಈ ಸ್ಪರ್ಧಿಗಳು ಟಾಪ್‌ 6 ಫೈನಲಿಸ್ಟ್‌ ಆಗಿದ್ದಾರೆ. ಯಾರಿಗೆ ಬಿಗ್‌ ಬಾಸ್‌ ವಿನ್ನರ್‌ ಪಟ್ಟ ಯಾರ ಪಾಲಾಗಲಿದೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.

ಇದೀಗ ಮಹರ್ಷಿ ದರ್ಶನ ಖ್ಯಾತಿಯ ವಿದ್ಯಾಶಂಕರಾನಂದ ಸರಸ್ವತಿ ಬಿಗ್ ಬಾಸ್‌ ಮನೆಗೆ ಬಂದಿದ್ದಾರೆ. ಅವರು ಸ್ಪರ್ಧಿಗಳ ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದಾರೆ. ಬಿಗ್‌ಬಾಸ್‌ ಸ್ಪರ್ಧಿಗಳ ಪೈಕಿ ಉಗ್ರಂ ಮಂಜು ಈ ಆವೃತ್ತಿಯಲ್ಲಿ ಉಗ್ರವಾಗಿ ಆಡಿ ಗಮನ ಸೆಳೆದಿದ್ದರು. ಸಹಸ್ಪರ್ಧಿಗಳಿಗೆ ಅವರು ಠಕ್ಕರ್ ಕೊಡುತ್ತಿದ್ದಾರೆ. ಮಂಜು ಮದುವೆ ಬಗ್ಗೆ ಗುರೂಜಿ ಭವಿಷ್ಯ ನುಡಿದಿದ್ದಾರೆ.

ತಂಗಿಯರ ಮದುವೆ ಆದಮೇಲೆ ಆಗೋಣ ಎಂದುಕೊಂಡಿದ್ದೆ. ಈಗ 38 ವರ್ಷ ವಯಸ್ಸು ಎಂದು ಮಂಜು ಹೇಳಿದರು. ಇದಕ್ಕೆ ಉತ್ತರಿಸಿದ ವಿದ್ಯಾಶಂಕರಾನಂದ ಸರಸ್ವತಿ, ನೀನು ಎಮೋಷನಲ್ ಫೂಲ್. ಹೊರಗಡೆ ನೋಡೋದಕ್ಕೆ ಹಲಸಿನ ಹಣ್ಣಿನ ರೀತಿ ಒರಟು ಆಗಿದ್ದೀಯಾ. ಆದರೆ, ನಿನ್ನ ಮನಸ್ಸು ತೊಳೆಗಳ ರೀತಿ ಮೃದು. ಯಾವಾಗಲೂ ಅಸ್ಥಿರತೆ ಕಾಡುತ್ತಿದೆ. ಮೋಸ ಹೋದರೆ ಅಥವಾ ಬೇರೆಯವರಿಗೆ ಅನ್ಯಾಯ ಆದರೆ ಎನ್ನುವ ಭಾವನೆಯಲ್ಲೇ ಬದುಕುತ್ತೀಯ ಎಂದು ಗುರೂಜಿ ಮಾತನಾಡಿದ್ದಾರೆ.

ಬದುಕು ಯಾವಾಗಲೂ ಅಸ್ಥಿರವೇ, ಅದರಲ್ಲಿ ಸ್ಥಿರತೇ ಕಂಡುಕೊಳ್ಳಬೇಕು. ಮುಂದಿನ ನಾಲ್ಕು ವರ್ಷ ಅಂದರೆ 2029ರವರೆಗೆ ತಿರುಗಿ ನೋಡುವ ಮಾತೇ ಇಲ್ಲ. 2026ರವರೆಗೆ ಕಂಕಣ ಬಲ ಇದೆ. ಹೊರಗೆ ಹೋಗ್ತಾ ಇದ್ದ ಹಾಗೆ ಮದುವೆ ಆಗುತ್ತದೆ. ಒಳ್ಳೆಯ ಸಂಗಾತಿ ಬರುತ್ತಾಳೆ ಎಂದು ಅಭಯ ನೀಡಿದ್ದಾರೆ.

ಮಂಜು ಎಂದರೆ ಒಳ್ಳೆಯ ಹೆಸರು ಬರುತ್ತದೆ. ತಲೆಗೆ ಏರಿಸಿಕೊಳ್ಳಬೇಡ ಎಂದು ಕಿವಿ ಮಾತು ಹೇಳಿದರು. ಇದಕ್ಕೆ ಮಂಜು ಖುಷಿಯಿಂದ ತಲೆ ಆಡಿಸಿದರು. ತಾಯಿಯ ಆರೋಗ್ಯದ ಬಗ್ಗೆ ಗಮನ ಇರಲಿ. ತಾಯಿಯನ್ನು ಕಳೆದುಕೊಳ್ಳೋಕೆ ಹೋಗಲೇಬಾರದು ಎಂದು ಗುರೂಜಿ ಹೇಳುತ್ತಿದ್ದಂತೆ ನೀವು ಹೇಳಿದ್ದು ಸರಿ ಇದೆ ಎಂದರು ಮಂಜು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments