Select Your Language

Notifications

webdunia
webdunia
webdunia
webdunia

ನುಡಿದಂತೇ ನಡೆದ ರಿಯಲ್ ಸ್ಟಾರ್ ಉಪೇಂದ್ರ

ನುಡಿದಂತೇ ನಡೆದ ರಿಯಲ್ ಸ್ಟಾರ್ ಉಪೇಂದ್ರ
ಬೆಂಗಳೂರು , ಸೋಮವಾರ, 17 ಮೇ 2021 (08:59 IST)
ಬೆಂಗಳೂರು: ಕೊರೋನಾ ಸಂಕಷ್ಟ ಕಾಲದಲ್ಲಿ ತಮ್ಮ ಬೆಳೆಗಳನ್ನು ಮಾರಲು ಸೂಕ್ತ ಮಾರುಕಟ್ಟೆ ಸಿಗದೇ ಕಷ್ಟಪಡುತ್ತಿರುವ ರೈತರ ಬೆಳೆಗಳನ್ನು ಕೊಂಡು ನೆರವು ನೀಡುತ್ತೇವೆ ಎಂದು ಘೋಷಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.


ಮೊದಲ ದಿನವೇ ರೈತರೊಬ್ಬರು ಬೆಳೆದ ಟೊಮ್ಯಾಟೋಗಳನ್ನು ಖರೀದಿಸಿ ಅದನ್ನು ದಿನಸಿ ಕಿಟ್ ನಲ್ಲಿ ಸೇರಿಸಿ ಬಡವರಿಗೆ ಹಂಚಿದ್ದಾರೆ.

ಜೊತೆಗೆ ನಿಜವಾಗಿಯೂ ಸಂಕಷ್ಟದಲ್ಲಿರುವ ರೈತರು ಸಂಪರ್ಕಿಸಿ. ಯಾಕೆಂದರೆ ಇದು ಲಾಭಕ್ಕಾಗಿ ಮಾಡುತ್ತಿರುವ ವ್ಯಾಪಾರ ಅಲ್ಲ ಎಂದು ಉಪೇಂದ್ರ ಮನವಿಯನ್ನೂ ಮಾಡಿದ್ದಾರೆ. ಈಗಾಗಲೇ ಹಲವು ರೈತರು ಉಪೇಂದ್ರರನ್ನು ಸಂಪರ್ಕಿಸುವ ಯತ್ನದಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ ನ್ನೂ ಮೀರಿಸಲಿದೆಯಾ ಭಜರಂಗಿ 2 ಕ್ಲೈಮ್ಯಾಕ್ಸ್?!