ನಾನೂ ಹೆಣ್ಣುಮಗಳ ತಂದೆ ಅಂತ ಗೊತ್ತಿದ್ದೂ ನಂಗೆ ಹೀಗೆಲ್ಲಾ ಟೀಕೆ ಮಾಡಿದ್ರಲ್ಲಾ? ಉಪೇಂದ್ರ ಬೇಸರ

Webdunia
ಬುಧವಾರ, 11 ಡಿಸೆಂಬರ್ 2019 (09:15 IST)
ಬೆಂಗಳೂರು: ಹೈದರಾಬಾದ್ ಎನ್ ಕೌಂಟರ್ ವಿಚಾರದಲ್ಲಿ ಟ್ರೋಲ್ ಗೊಳಗಾಗಿದ್ದ ರಿಯಲ್ ಸ್ಟಾರ್ ಉಪೇಂದ್ರ ತಮ್ಮನ್ನು ಟೀಕಿಸಿದವರಿಗೆ ಪ್ರತ್ಯುತ್ತರ ಕೊಟ್ಟಿದ್ದಾರೆ.


ಹೈದರಾಬಾದ್ ನಲ್ಲಿ ಎನ್ ಕೌಂಟರ್ ಆದವರೇ ನಿಜವಾಗಿಯೂ ರೇಪಿಸ್ಟ್ ಗಳೇ? ಅಥವಾ ಇವರ ಹಿಂದೆ ಪ್ರಭಾವಿಗಳ ಕೈವಾಡವಿದೆಯೇ? ಎಲ್ಲಾ ಪ್ರಭಾವಿಗಳಿಗೂ ಇದೇ ರೀತಿಯ ಶಿಕ್ಷೆಯಾಗುತ್ತಾ ಎಂದು ಉಪೇಂದ್ರ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದುಕೊಂಡಿದ್ದರು. ಎನ್ ಕೌಂಟರ್ ಮಾಡುವುದನ್ನೇ ವಿರೋಧಿಸುತ್ತಿರುವುದಕ್ಕೆ ಸಾಕಷ್ಟು ಜನ ಉಪೇಂದ್ರರನ್ನು ಟೀಕಿಸಿದ್ದರು.

ಇದಕ್ಕೆಲ್ಲಾ ಉಪೇಂದ್ರ ಈಗ ಉತ್ತರ ಕೊಟ್ಟಿದ್ದಾರೆ. ‘ಎನ್ ಕೌಂಟರ್ ಗಳು ಪ್ರಭಾವಿಗಳಿಂದ ದುರುಪಯೋಗವಾಗಬಾರದು, ನ್ಯಾಯಾಂಗ ವ್ಯವಸ್ಥೆಯನ್ನು ಸರ್ಕಾರ ಚುರುಕುಗೊಳಿಸಬೇಕು ಎಂಬುದಷ್ಟೇ ನನ್ನ ಉದ್ದೇಶವಾಗಿತ್ತು. ನಾನೂ ಒಂದು ಹೆಣ್ಣು ಮಗುವಿನ ತಂದೆ, ಅತ್ಯಾಚಾರಿಗಳ ಪರವಾಗಿ ಮಾತನಾಡಿದೆ ಎಂದು ಬಿಂಬಿಸುವಂತಹ ಹೇಯ ಮನಸ್ಸಿನ ಜನ ಈ ಸಮಾಜದಲ್ಲಿ (ಕೆಲವರು ನನ್ನ ಜತೆಗೇ) ಇದ್ದಾರಲ್ಲಾ ಎಂದು ನೋವಾಗುತ್ತಿದೆ’ ಎಂದು ಉಪೇಂದ್ರ ಬೇಸರದಿಂದಲೇ ತಮ್ಮ ಮೊದಲಿನ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ಮುಂದಿನ ಸುದ್ದಿ
Show comments