ಪೌರತ್ವ ತಿದ್ದುಪಡಿ ಪ್ರತಿಭಟನೆಗೆ ತನ್ನದೇ ವ್ಯಾಖ್ಯಾನ ಕೊಟ್ಟ ರಿಯಲ್ ಸ್ಟಾರ್ ಉಪೇಂದ್ರ

Webdunia
ಬುಧವಾರ, 18 ಡಿಸೆಂಬರ್ 2019 (09:12 IST)
ಬೆಂಗಳೂರು: ಪೌರತ್ವ ತಿದ್ದುಪಡಿ ಖಾಯಿದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದಕ್ಕೆ ದೇಶದಲ್ಲಿ ಪ್ರತಿಭಟನೆಯ ಕಾವೇರುತ್ತಿದ್ದರೆ, ಇತ್ತ ಪ್ರಜಾಕೀಯ ಸಂಸ್ಥಾಪಕ, ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇ ರೀತಿಯಲ್ಲಿ ಇದಕ್ಕೆ ವ್ಯಾಖ‍್ಯಾನ ನೀಡಿದ್ದಾರೆ.


ಮೊನ್ನೆಯಷ್ಟೇ ಹೈದರಾಬಾದ್ ಎನ್ ಕೌಂಟರ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಉಪೇಂದ್ರ ಇಂದು ಪೌರತ್ವ ತಿದ್ದುಪಡಿ ಬಗ್ಗೆ ಪರೋಕ್ಷವಾಗಿ ರಾಜಕೀಯ ಪಕ್ಷಗಳಿಗೆ ಛಾಟಿ ಬೀಸಿದ್ದಾರೆ.

‘ಒಂದು ಪಕ್ಷಕಕ್ಕೆ ಒಂದು ಧರ್ಮ ಓಟ್ ಬ್ಯಾಂಕ್, ಇನ್ನೊಂದು ಪಕ್ಷಕ್ಕೆ ಇನ್ನೊಂದು ಧರ್ಮ ಓಟ್ ಬ್ಯಾಂಕ್. ಈ 20% ರಾಜರ ಗಲಾಟೆಯಲ್ಲಿ 80% ಜನ ಶಿಕ್ಷಣ, ಆರೋಗ್ಯ, ಉದ್ಯೋಗ ಇವುಗಳನ್ನು ಓಟ್ ಬ್ಯಾಂಕ್ ಮಾಡಿಕೊಳ್ಳುವ ವಿಚಾರ ಮಾಡಲೇ ಇಲ್ಲ. ಯಾಕೆಂದರೆ ನಮಗೆ ವಿವೇಚನೆಗಿಂತ ಆವೇಶವೇ ಮುಖ್ಯ. ವಿಚಾರಗಳು ಬೋರಿಂಗ್. ಆವೇಶ ಥ್ರಿಲ್ಲಿಂಗ್’ ಎಂದು ಉಪೇಂದ್ರ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲ ಮತ್ತೊಂದು ಸಂದೇಶ ಬರೆದುಕೊಂಡಿದ್ದು, ಸಿಎಎಯನ್ನು ಗಂಭೀರವಾಗಿ ಪರಿಗಣಿಸದಿರಿ. ಇದು ಇನ್ನು ಒಂದು ವಾರ ಜನರಿಗೆ, ಸಾಮಾಜಿಕ ಜಾಲತಾಣಗಳಿಗೆ, ಮಾಧ‍್ಯಮಗಳಿಗೆ ಆಹಾರ ಹಾಹಾಕಾರ ಸಿಕ್ಕಾಯ್ತು. ಹೊಟ್ಟೆಗೆ ಹಿಟ್ಟು ಇಲ್ದೇ ಇದ್ರೂ ಜುಟ್ಟಿಗೆ ಮಲ್ಲಿಗೆ ಹೂ ಇಡೋ ಕೆಲಸ ಸಿಕ್ತು. ಶಬಾಸ್ ರಾಜಕೀಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾನೆ ವಿರುದ್ಧ ಸಿಡಿದೆದ್ದ ಪಲಾಶ್ ಮುಚ್ಛಲ್: ಸ್ಮೃತಿ ಮಂದಾನ ಮಾಜಿ ಪ್ರಿಯಕರ ಮಾಡಿದ್ದೇನು ಗೊತ್ತಾ

ಲ್ಯಾಂಡ್ ಲಾರ್ಡ್ ಸಿನಿಮಾ ವೀಕ್ಷಿಸುತ್ತೇನೆ ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಹಿಂದಿನ ದಿನ ಪಾಲಾಶ್ ಬೇರೊಬ್ಬಳೊಂದಿಗೆ ಸಿಕ್ಕಿಬಿದ್ದಿದ್ದ: ವಿದ್ಯಾನ್ ಮಾನೆ ಆರೋಪಕ್ಕೆ ಪಾಲಾಶ್ ತಿರುಗೇಟು

ಗಿಲ್ಲಿ ನಟನಿಗೆ ಹೇಳಿದಂತೇ 10 ಲಕ್ಷ ಕೊಟ್ಟೇ ಬಿಟ್ರು ಕಿಚ್ಚ ಸುದೀಪ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

ಮುಂದಿನ ಸುದ್ದಿ
Show comments