Webdunia - Bharat's app for daily news and videos

Install App

ಪೌರತ್ವ ತಿದ್ದುಪಡಿ ಪ್ರತಿಭಟನೆಗೆ ತನ್ನದೇ ವ್ಯಾಖ್ಯಾನ ಕೊಟ್ಟ ರಿಯಲ್ ಸ್ಟಾರ್ ಉಪೇಂದ್ರ

Webdunia
ಬುಧವಾರ, 18 ಡಿಸೆಂಬರ್ 2019 (09:12 IST)
ಬೆಂಗಳೂರು: ಪೌರತ್ವ ತಿದ್ದುಪಡಿ ಖಾಯಿದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದಕ್ಕೆ ದೇಶದಲ್ಲಿ ಪ್ರತಿಭಟನೆಯ ಕಾವೇರುತ್ತಿದ್ದರೆ, ಇತ್ತ ಪ್ರಜಾಕೀಯ ಸಂಸ್ಥಾಪಕ, ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇ ರೀತಿಯಲ್ಲಿ ಇದಕ್ಕೆ ವ್ಯಾಖ‍್ಯಾನ ನೀಡಿದ್ದಾರೆ.


ಮೊನ್ನೆಯಷ್ಟೇ ಹೈದರಾಬಾದ್ ಎನ್ ಕೌಂಟರ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಉಪೇಂದ್ರ ಇಂದು ಪೌರತ್ವ ತಿದ್ದುಪಡಿ ಬಗ್ಗೆ ಪರೋಕ್ಷವಾಗಿ ರಾಜಕೀಯ ಪಕ್ಷಗಳಿಗೆ ಛಾಟಿ ಬೀಸಿದ್ದಾರೆ.

‘ಒಂದು ಪಕ್ಷಕಕ್ಕೆ ಒಂದು ಧರ್ಮ ಓಟ್ ಬ್ಯಾಂಕ್, ಇನ್ನೊಂದು ಪಕ್ಷಕ್ಕೆ ಇನ್ನೊಂದು ಧರ್ಮ ಓಟ್ ಬ್ಯಾಂಕ್. ಈ 20% ರಾಜರ ಗಲಾಟೆಯಲ್ಲಿ 80% ಜನ ಶಿಕ್ಷಣ, ಆರೋಗ್ಯ, ಉದ್ಯೋಗ ಇವುಗಳನ್ನು ಓಟ್ ಬ್ಯಾಂಕ್ ಮಾಡಿಕೊಳ್ಳುವ ವಿಚಾರ ಮಾಡಲೇ ಇಲ್ಲ. ಯಾಕೆಂದರೆ ನಮಗೆ ವಿವೇಚನೆಗಿಂತ ಆವೇಶವೇ ಮುಖ್ಯ. ವಿಚಾರಗಳು ಬೋರಿಂಗ್. ಆವೇಶ ಥ್ರಿಲ್ಲಿಂಗ್’ ಎಂದು ಉಪೇಂದ್ರ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲ ಮತ್ತೊಂದು ಸಂದೇಶ ಬರೆದುಕೊಂಡಿದ್ದು, ಸಿಎಎಯನ್ನು ಗಂಭೀರವಾಗಿ ಪರಿಗಣಿಸದಿರಿ. ಇದು ಇನ್ನು ಒಂದು ವಾರ ಜನರಿಗೆ, ಸಾಮಾಜಿಕ ಜಾಲತಾಣಗಳಿಗೆ, ಮಾಧ‍್ಯಮಗಳಿಗೆ ಆಹಾರ ಹಾಹಾಕಾರ ಸಿಕ್ಕಾಯ್ತು. ಹೊಟ್ಟೆಗೆ ಹಿಟ್ಟು ಇಲ್ದೇ ಇದ್ರೂ ಜುಟ್ಟಿಗೆ ಮಲ್ಲಿಗೆ ಹೂ ಇಡೋ ಕೆಲಸ ಸಿಕ್ತು. ಶಬಾಸ್ ರಾಜಕೀಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments