Webdunia - Bharat's app for daily news and videos

Install App

ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಬೆನ್ನಿಗೆ ನಿಂತಿದ್ದಕ್ಕೆ ಟ್ರೋಲ್ ಆದ ರಿಯಲ್ ಸ್ಟಾರ್ ಉಪೇಂದ್ರ

Webdunia
ಶನಿವಾರ, 1 ಅಕ್ಟೋಬರ್ 2022 (17:02 IST)
WD
ಬೆಂಗಳೂರು: ಎದುರು ಮನೆಯವರಿಗೆ ಬೆದರಿಕೆ ಮತ್ತು ಕಿರುಕುಳ ಕೊಟ್ಟ ಆರೋಪ ಎದುರಿಸುತ್ತಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಪರ ನಿಂತಿದ್ದಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದಾರೆ.

ಎದುರು ಮನೆಯ ಮಹಿಳೆ ಮತ್ತು ಆಕೆಯ ಪತಿಯ ಜೊತೆ ಜಗಳವಾಡಿದ್ದಾರೆಂದು ಸ್ನೇಹಿತ್ ವಿರುದ್ಧ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಸ್ನೇಹಿತ್ ನನ್ನು ಚಿಕ್ಕವನಿಂದ ನೋಡಿದ್ದೇನೆ. ಆತ ಒಳ್ಳೆಯ ಹುಡುಗ. ಹಾಗೇನಾದರೂ ತಪ್ಪಾಗಿದ್ದರೆ ಇಬ್ಬರೂ ಕೂತು ಮಾತುಕತೆ ಮಾಡಿ ಪರಿಹರಿಸಿಕೊಳ್ಳಲಿ. ಒಂದಂತೂ ಎಲ್ಲರಿಗೂ ಅನ್ವಯಿಸುತ್ತದೆ. ಅಜ್ಞಾನದ ಫಲ ಅಹಂಕಾರ, ಅಹಂಕಾರದ ಫಲ ಧ್ವೇಷ, ಧ್ವೇಷದ ಫಲ ಸರ್ವನಾಶ ಎಂದು ಉಪೇಂದ್ರ ಸಂದೇಶ ಬರೆದಿದ್ದರು.

ಉಪೇಂದ್ರ ಇಂತಹದ್ದೊಂದು ಸಂದೇಶ ಪ್ರಕಟಿಸುತ್ತಿದ್ದಂತೇ ಸೋಷಿಯಲ್ ಮೀಡಿಯಾದಲ್ಲಿ ನೂರಾರು ಮಂದಿ ಕಾಮೆಂಟ್ ಮಾಡಿ ಅವರನ್ನು ಟ್ರೋಲ್ ಮಾಡಿದ್ದಾರೆ. ಆರೋಪಿಗಳ ಪರವಾಗಿ ನಿಂತಿದ್ದಕ್ಕೆ ಕೆಲವರು ಅವಾಚ್ಯವಾಗಿ ನಿಂದಿಸಿದ್ದಾರೆ. ಇದಕ್ಕೆ ಕೂಡಾ ಉಪೇಂದ್ರ ಪ್ರತಿಕ್ರಿಯಿಸಿದ್ದು, ನೋಡಿ ಇದನ್ನೆಲ್ಲಾ ನೀವು ಪ್ರಶ್ನಿಸುತ್ತೀರಿ. ಆದರೆ ನಮ್ಮ ಸುತ್ತಮುತ್ತ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಲು ನಿಮಗೆ ಧೈರ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments