Webdunia - Bharat's app for daily news and videos

Install App

ಮತ್ತೆ ಕನ್ನಡ ಸಿನಿಮಾದಲ್ಲಿ ಅಭಿನಯಿಸೋ ಇಚ್ಛೆಯಿದೆ- ಊರ್ವಶ್ರೀ ರೌಟೆಲಾ

Webdunia
ಮಂಗಳವಾರ, 9 ಫೆಬ್ರವರಿ 2016 (11:27 IST)
ಮಿಸ್ಟರ್ ಐರಾವತ ಸಿನಿಮಾದಲ್ಲಿ ದರ್ಶನ್ ತೂಗುದೀಪ್ ಜೊತೆ ತೆರೆ ಮೇಲೆ ರೋಮ್ಯಾನ್ಸ್ ಮಾಡಿ ನಾಪತ್ತೆಯಾಗಿದ್ದ ನಟಿ ಊರ್ವಶ್ರೀ ಮತ್ತೆ ಕನ್ನಡಕ್ಕೆ ಬರೋ ಇಂಗಿತ ವ್ಯಕ್ತಪಡಿಸಿದ್ದಾರೆ. ಅವಕಾಶ ಸಿಕ್ರೆ ಮತ್ತೆ ಕನ್ನಡದಲ್ಲಿ ಅಭಿನಯಿಸ್ತೇನೆ ಅಂತಾ ಊರ್ವಶ್ರೀ ಹೇಳಿದ್ದಾರೆ.

ಮೊನ್ನೆಯಷ್ಟೇ ಮಿಸ್ ಯೂನಿವರ್ಸ್ ಸ್ಪರ್ಧೆಯ್ಲಲ್ಲಿ ಭಾಗವಹಿಸಿದ್ದ ಊರ್ವಶ್ರೀ ಮಿಸ್ಟರ್ ಐರಾವತ ಸಿನಿಮಾದಲ್ಲಿ ಅಭಿನಯಿಸಿದ ಬಳಿಕ ಸ್ಯಾಂಡಲ್ ವುಡ್ ನಿಂದ ನಾಪತ್ತೆಯಾಗಿದ್ದರು. ಹೆಚ್ಚಿನವರು ಅವರು ಮತ್ತೆ ಕನ್ನಡಕ್ಕೆ ವಾಪಸ್ ಬರ್ತಾರಾ ಅನ್ನೋ ಸಂಶಯ ವ್ಯಕ್ತಪಡಿಸಿದ್ದರು.ಆದ್ರೀಗ ಊರ್ವಶ್ರೀ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಅಲ್ಲದೇ ಅವಕಾಶ ಸಿಕ್ರೆ ಮತ್ತೆ ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತೇನೆ ಅಂತಾ ಅವರು ಹೇಳಿದ್ದಾರೆ. ನಾನು ಒಂದೇ ಒಂದು ಸಿನಿಮಾದಿಂದಾಗಿ ಇಲ್ಲಿ ಸಾವಿರಾರು ಅಭಿಮಾನಿಗಳನ್ನು ಗಳಿಸಿದ್ದೇನೆ. ಜನರ ಪ್ರೀತಿ ನೋಡಿ ಖುಷಿಯಾಗುತ್ತೆ ಅಂದಿದ್ದಾರೆ.
 
ಇನ್ನು ಊರ್ವಶ್ರೀ ಹಿಂದಿ ಸಿನಿಮಾದಲ್ಲಿಯೂ ಅಭಿನಯಿಸುತ್ತಿದ್ದಾರೆ.ಬಾಲಿವುಡ್ ನ ಸನಮ್ ರೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದಾರೆ. ಈ ಸಿನಿಮಾದ ಬಗ್ಗೆ ಅವರಿಗೆ ಒಂದಷ್ಟು ನಿರೀಕ್ಷೆಗಳಿವೆ. ಈ ವಾರ ಈ ಸಿನಿಮಾ ತೆರೆಗೆ ಬರುತ್ತಿದೆ.ಪುಲ್ಕಿತ್ ಸಾಮ್ರಾಟ್ ಹಾಗೂ ಯಾಮಿ ಗೌತಮಿ ಈ ಸಿನಿಮಾದಲ್ಲಿ ಊರ್ವಶ್ರೀ ಅವರಿಗೆ ಸಾಥ್ ನೀಡಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments