Webdunia - Bharat's app for daily news and videos

Install App

ರೇಣುಕಾಸ್ವಾಮಿ ವಿಕೃತ ಕಾಮಿ, ದರ್ಶನ್ ವಿರುದ್ಧ ನಾನು ಹೇಳಿಕೆ ನೀಡಲ್ಲ ಎಂದ ವಿ ಮನೋಹರ್

Krishnaveni K
ಬುಧವಾರ, 3 ಜುಲೈ 2024 (12:00 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಂಡ್ ಗ್ಯಾಂಗ್ ಬಂಧನಕ್ಕೊಳಗಾಗಿದ್ದಾರೆ. ಈ ಪ್ರಕರಣದ ಬಗ್ಗೆ ಸಂಗೀತ ನಿರ್ದೇಶಕ ವಿ ಮನೋಹರ್ ಪ್ರತಿಕ್ರಿಯಿಸಿದ್ದಾರೆ.

ಹತ್ಯೆಯಾದ ರೇಣುಕಾಸ್ವಾಮಿ ಮುಗ್ದನಲ್ಲ. ಆತ ವಿಕೃತ ಕಾಮಿ. ದರ್ಶನ್ ವಿರುದ್ಧ ನಾನು ಏನೂ ನೆಗೆಟಿವ್ ಆಗಿ ಮಾತನಾಡಲ್ಲ ಎಂದು ವಿ ಮನೋಹರ್ ಹೇಳಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಪರವಾಗಿ ಈಗಾಗಲೇ ಹಲವು ತಾರೆಯರು ಬಹಿರಂಗ ಹೇಳಿಕೆ ನೀಡಿದ್ದಾರೆ.

ಆ ಸಾಲಿಗೆ ಈಗ ವಿ ಮನೋಹರ್ ಕೂಡಾ ಸೇರಿಕೊಂಡಿದ್ದಾರೆ. ದರ್ಶನ್ ಜೊತೆ ವಿ ಮನೋಹರ್ ಲಾಲಿ ಎನ್ನುವ ಸಿನಿಮಾ ಮಾಡಿದ್ದರು. ಈ ಸಿನಿಮಾದಲ್ಲಿ ದರ್ಶನ್ ಗೆ ಸಂಗೀತ ಗುರುಗಳಾಗಿ ವಿ ಮನೋಹರ್ ಅಭಿನಯಿಸಿದ್ದರು. ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ವಿ ಮನೋಹರ್ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಜೊತೆ ನಾನು ಜೊತೆಯಾಗಿ ಕೆಲಸ ಮಾಡಬೇಕಿತ್ತು. ಈ ಬಗ್ಗೆ ಅವರು ಪ್ರಾಮಿಸ್ ಮಾಡಿದ್ದರು. ಆದರೆ ಅಷ್ಟರಲ್ಲಿ ಹೀಗಾಯಿತು ಎಂದು ಮನೋಹರ್ ಹೇಳಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ದರ್ಶನ್ ಪರವಾಗಿ ಬ್ಯಾಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಹೆಣ್ಣು ಮಕ್ಕಳಿಗೆ ಕೆಟ್ಟ ಕೆಟ್ಟದಾಗಿ ಮೆಸೇಜ್ ಹಾಕಿದ್ದ. ಅವನಿಗೇನೋ ಹೆಣ್ಣು ಮಕ್ಕಳ ಶಾಪ ತಟ್ಟಿತು. ಅದಕ್ಕೆ ಹೀಗಾಯಿತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ