Webdunia - Bharat's app for daily news and videos

Install App

ಅಸಭ್ಯ ಪದ ಬಳಕೆಗೆ ರಾಕಿ ಭಾಯಿ ಯಶ್ ಫ್ಯಾನ್ಸ್ ಕ್ಷಮೆ ಕೇಳಿದ ವೆಂಕಟೇಶ್ ಮಹಾ

Webdunia
ಮಂಗಳವಾರ, 7 ಮಾರ್ಚ್ 2023 (09:40 IST)
ಹೈದರಾಬಾದ್: ಕೆಜಿಎಫ್ 2 ಸಿನಿಮಾ ಮತ್ತು ರಾಕಿ ಭಾಯಿ ಯಶ್ ಬಗ್ಗೆ ಅಸಭ್ಯ ಪದ ಬಳಕೆ ಮಾಡಿದ್ದ ತೆಲುಗು ನಿರ್ದೇಶಕ ವೆಂಕಟೇಶ್ ಮಹಾ ಕೊನೆಗೂ ಕ್ಷಮೆ ಕೇಳಿದ್ದಾರೆ.

ಯೂ ಟ್ಯೂಬ್ ಸಂದರ್ಶನವೊಂದರಲ್ಲಿ ವೆಂಕಟೇಶ್ ಮಹಾ ಕೆಜಿಎಫ್ 2 ಕತೆ ಬಗ್ಗೆ ತಮಾಷೆ ಮಾಡಿದ್ದಲ್ಲದೆ, ರಾಕಿ ಭಾಯಿ ಬಗ್ಗೆ ಅಸಭ್ಯ ಪದ ಬಳಕೆ ಮಾಡಿ ಟೀಕೆ ಮಾಡಿದ್ದರು. ಇದು ಯಶ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿತ್ತು. ವೆಂಕಟೇಶ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದರು.

ಇದರ ಬೆನ್ನಲ್ಲೇ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ವೆಂಕಟೇಶ್ ಮಹಾ, ‘ಅಭಿಮಾನಿಗಳಿಗೆ, ಸಿನಿ ಪ್ರಿಯರಿಗೆ ಭಾಷೆ ಸರಿ ಇಲ್ಲ ಎನಿಸುತ್ತದೆ. ನನ್ನ ಅಭಿಪ್ರಾಯವನ್ನು ಹೊರ ಹಾಕಲು ಬಳಕೆ ಮಾಡಿದ ಭಾಷೆ ವಿಚಾರವಾಗಿ ಕ್ಷಮೆ ಕೇಳುತ್ತೇನೆ. ಇದು ಸಿನಿಮಾ ಕುರಿತ ಚರ್ಚೆಯಾಗಿತ್ತು.  ಅದೇ ಸಂದರ್ಶನದಲ್ಲಿ ಕನ್ನಡ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದೇನೆ. ನನಗೆ ನನ್ನ ಅಭಿಪ್ರಾಯ ಹೊರ ಹಾಕುವ ಹಕ್ಕಿದೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಆದರೆ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮುಂದಿನ ಸುದ್ದಿ
Show comments