Webdunia - Bharat's app for daily news and videos

Install App

ಮಧುರ ಗಾನಗಳ ನಿರ್ಮಾತೃ, ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ

Webdunia
ಸೋಮವಾರ, 12 ಅಕ್ಟೋಬರ್ 2020 (09:09 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ಮಹಾನ್ ಪ್ರತಿಭೆ ಇಹಲೋಕದ ಯಾತ್ರೆ ಮುಗಿಸಿದೆ. ಖ್ಯಾತ ಸಂಗೀತ ನಿರ್ದೇಶಕ ಜೋಡಿ ರಾಜನ್-ನಾಗೇಂದ್ರ ಪೈಕಿ ರಾಜನ್ ಇನ್ನಿಲ್ಲವಾಗಿದ್ದಾರೆ.


ನಿನ್ನೆ ರಾತ್ರಿ 11 ಗಂಟೆಗೆ ಅವರು ನಿಧನರಾಗಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ತುಳು ಸೇರಿದಂತೆ ಸುಮಾರು 375 ಕ್ಕೂ ಹೆಚ್ಚು ಚಿತ್ರಗಳ 6000 ಕ್ಕೂ ಹೆಚ್ಚು ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡಿದ್ದ ರಾಜನ್-ನಾಗೇಂದ್ರ ಜೋಡಿ ಇನ್ನು ನೆನಪು ಮಾತ್ರ. ನಾಗೇಂದ್ರ 2000 ರಲ್ಲೇ ನಿಧನರಾಗಿದ್ದರು. ಇದೀಗ ರಾಜನ್ ಕೂಡಾ ಚಿರನಿದ್ರೆಗೆ ಜಾರಿದ್ದಾರೆ. ‘ಗಂಧದ ಗುಡಿ’, ‘ಬಯಲು ದಾರಿ’, ‘ಶ್ರೀನಿವಾಸ ಕಲ್ಯಾಣ’, ‘ಎರಡು ಕನಸು’ ಮುಂತಾದ ಸೂಪರ್ ಹಿಟ್ ಸಿನಿಮಾಗಳ ಸೂಪರ್ ಹಿಟ್ ಹಾಡುಗಳಿಗೆ ಧ್ವನಿ ಸಂಯೋಜಿಸಿದ್ದರು. ಇಂದು ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯಲಿದೆ ಎಂದು ಕುಟುಂಬವರ್ಗ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments