ಜಾಮೀನು ನಿರಾಸೆ ಬೆನ್ನಲ್ಲೇ ಪತಿಗೆ ಧೈರ್ಯ ತುಂಬಲು ಬಂದ ವಿಜಯಲಕ್ಷ್ಮೀ

Sampriya
ಸೋಮವಾರ, 30 ಸೆಪ್ಟಂಬರ್ 2024 (16:28 IST)
ಬಳ್ಳಾರಿ: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 4ಕ್ಕೆ ಮುಂದೂಡಿಕೆಯಾಗುತ್ತಿದ್ದ ಹಾಗೇ ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ಭೇಟಿಗೆ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಈ ವೇಳೆ ದರ್ಶನ್ ಆಪ್ತ, ನಟ ಧನ್ವೀರ್ ಕೂಡಾ ಇದ್ದರು. ಇನ್ನೂ ದರ್ಶನ್‌ಗೆ ಎರಡು ಬ್ಯಾಗ್‌ನಲ್ಲಿ ಬಟ್ಟೆ, ಬಿಸ್ಕೆಟ್, ಪ್ರೂಟ್ಸ್‌, ಡ್ರೈ ಪ್ರೂಟ್ಸ್‌ಗಳನ್ನು ತಂದಿದ್ದಾರೆ.

ದರ್ಶನ್ ಅವರು ಜೈಲು ಸೇರಿ ಭಾನುವಾರಗೆ 100 ದಿನ ಆಗಿದ್ದು, ಇನ್ನೂ ಪತಿಗೆ ಧೈರ್ಯ ತುಂಬಲು ವಿಜಯಲಕ್ಷ್ಮೀ ಪ್ರತಿ ಸೋಮವಾರ ಭೇಟಿ ನೀಡುತ್ತಾರೆ. ಇನ್ನೂ ಈ ಪ್ರಕರಣದಿಂದ ದರ್ಶನ್ ಅವರನ್ನು ಹೊರತರಲು ವಿಜಯಲಕ್ಷ್ಮಿ ದೇವರ ಮೊರೆ ಹೋಗುವ ಜತೆ ಕಾನೂನು ಹೋರಾಟ ನಡೆಸುತ್ತಿದ್ದಾರೆ.

ಭೇಟಿ ವೇಳೆ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲಿದ್ದಾರೆ. ಈಗಾಗಲೇ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಹಾಗೂ ಪವಿತ್ರ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಕ್ಟೋಬರ್ 4ಕ್ಕೆ ಮುಂದೂಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments