Webdunia - Bharat's app for daily news and videos

Install App

ಏನೇ ಆದ್ರೂ ಪತಿ ದರ್ಶನ್ ಕೈ ಬಿಡುವವರಲ್ಲ ವಿಜಯಲಕ್ಷ್ಮಿ ಎನ್ನುವುದಕ್ಕೆ ಇದೇ ಸಾಕ್ಷಿ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (10:42 IST)
ಬಳ್ಳಾರಿ: ಪತಿ ದರ್ಶನ್ ಇನ್ನೊಬ್ಬ ಹೆಣ್ಣಿನ ಸಹವಾಸ ಮಾಡಿ ಆಕೆಗಾಗಿ ಹತ್ಯೆ ಮಾಡಿ ಜೈಲು ಸೇರಿದ್ದರೂ ಕೈ ಹಿಡಿದ ಪತ್ನಿ ವಿಜಯಲಕ್ಷ್ಮಿ ಮಾತ್ರ ಯಾವತ್ತೂ ಗಂಡನ ಕೈ ಬಿಡಲಿಲ್ಲ. ಇಂದು ಮತ್ತೊಮ್ಮೆ ಅದು ಸಾಬೀತಾಗುತ್ತಿದೆ.

ಇಂದು ನಟ ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗುತ್ತಿದ್ದು ಮತ್ತೊಮ್ಮೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತಾವಿರುವ ಜೈಲಿನಿಂದಲೇ ಎಲ್ಲಾ ಆರೋಪಿಗಳೂ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ. ಇದಾದ ಬಳಿಕ ಎಲ್ಲಾ ಆರೋಪಿಗಳೂ ಜಾಮೀನಿಗೆ ಅರ್ಜಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ.

ತನ್ನ ಪತಿಯ ಬಿಡುಗಡೆಯಾಗಿ ಶತಾಯ ಗತಾಯ ಪ್ರಯತ್ನ ನಡೆಸುತ್ತಿರುವ ವಿಜಯಲಕ್ಷ್ಮಿ ಈಗಾಗಲೇ ದೇವರ ಮೊರೆ ಹೋಗಿದ್ದಾಗಿದೆ. ಹಲವು ಪ್ರಭಾವಿಗಳನ್ನು ಭೇಟಿ ಮಾಡಿದ್ದಾರೆ. ಪತಿಯನ್ನು ಬಳ್ಳಾರಿ ಜೈಲಿನಲ್ಲಿಟ್ಟರೂ ಪ್ರತೀ ವಾರ ವಕೀಲರ ಜೊತೆ ಬಂದು ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಇಂದೂ ವಿಜಯಲಕ್ಷ್ಮಿ ಪತಿಯ ಭೇಟಿಗಾಗಿ ಬಳ್ಳಾರಿಗೆ ಬರಲಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಸುಮಾರು 5-6 ಗಂಟೆ ದಾರಿಯಿದೆ. ಹಾಗಿದ್ದರೂ ವಿಜಯಲಕ್ಷ್ಮಿ ಪ್ರತೀ ವಾರ ತಪ್ಪದೇ ಪತಿಯನ್ನು ಭೇಟಿ ಮಾಡುತ್ತಿದ್ದಾರೆ. ಇಂದು ನ್ಯಾಯಾಲಯದ ಕಲಾಪಗಳು ಮುಗಿದ ನಂತರ ವಿಜಯಲಕ್ಷ್ಮಿ ಭೇಟಿ ನೀಡಲಿದ್ದಾರೆ. ಈ ವೇಳೆ ಜಾಮೀನಿಗೆ ಅರ್ಜಿ ಸಲ್ಲಿಸುವ ಸಂಬಂಧ ದರ್ಶನ್ ಜೊತೆ ಚರ್ಚೆ ನಡೆಸಲಿದ್ದಾರೆ. ಅವರಿಗೆ ದರ್ಶನ್ ಸಹೋದರ ದಿನಕರ್ ಕೂಡಾ ಸಾಥ್ ನೀಡುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ