Select Your Language

Notifications

webdunia
webdunia
webdunia
webdunia

ಜೈಲಿನಲ್ಲಿ 6ನೇ ಬಾರಿ ಪತಿಯನ್ನು ಭೇಟಿಯಾದ ವಿಜಯಲಕ್ಷ್ಮೀ: ದರ್ಶನ್‌ ಕೈಸೇರಿದ ಕೊಲ್ಲೂರು ಪ್ರಸಾದ

ಜೈಲಿನಲ್ಲಿ 6ನೇ ಬಾರಿ ಪತಿಯನ್ನು ಭೇಟಿಯಾದ ವಿಜಯಲಕ್ಷ್ಮೀ: ದರ್ಶನ್‌ ಕೈಸೇರಿದ ಕೊಲ್ಲೂರು ಪ್ರಸಾದ

Sampriya

ಬೆಂಗಳೂರು , ಸೋಮವಾರ, 29 ಜುಲೈ 2024 (13:20 IST)
ಬೆಂಗಳೂರು: ನಟ ದರ್ಶನ್ ಅವರನ್ನು ಕೊಲೆ ಪ್ರಕರಣದಿಂದ ಕಾಪಾಡುವಂತೆ ಕೊಲ್ಲೂರು ಮುಕಾಂಬಿಕೆಯ ಮೊರೆ ಹೋಗಿದ್ದ ವಿಜಯಲಕ್ಷ್ಮೀ ಅವರು ಇಂದು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ದೇವಿಯ ಪ್ರಸಾದವನ್ನು ಪತಿಗೆ ನೀಡಿದ್ದಾರೆ.

ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಪತಿಯನ್ನು ಈ ಪ್ರಕರಣದಿಂದ ಹೊರತರಲು ಕಾನೂನಿನ ಮೂಲಕ ಹೋರಾಟ ನಡೆಸುತ್ತಿರುವ ವಿಜಯಲಕ್ಷ್ಮೀ ಅವರು ಶುಕ್ರವಾರ ಕೊಲ್ಲೂರು ಮುಕಾಂಬಿಕೆ ದೇವಿಯ ದರ್ಶನ ಮಾಡಿದ್ದರು.

ಈ ಪ್ರಕರಣದಲ್ಲಿ ದರ್ಶನ್ ಅವರನ್ನು ಕಾಪಾಡುವಂತೆ ದೇವಿಯ ಸನ್ನಿಧಿಯಲ್ಲಿ ನವಚಂಡಿಕಾ ಯಾಗ ಮಾಡಿದ್ದರು. ಇನ್ನು ಸಹೋದರ ದಿನಕರ್ ತೂಗುದೀಪ್ ಅವರು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಸಹೋದರನಿಗೆ ಒಳ್ಳೆದಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದರು.

ಇದೀಗ ಇಂದು ವಿಜಯಲಕ್ಷ್ಮೀ ಹಾಗೂ ದಿನಕರ್ ತೂಗುದೀಪ್ ಅವರು ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್ ಅವರನ್ನು ಭೇಟಿಯಾಗಲು ಬಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಜಯ್ ದತ್ 65ನೇ ಬರ್ತಡೇ: 'ಕೆಡಿ' ಚಿತ್ರತಂಡದಿಂದ ವಿಶೇಷ ಉಡುಗೊರೆ