Webdunia - Bharat's app for daily news and videos

Install App

ಬಳ್ಳಾರಿಗೆ ಬಂದ್ರು, ದರ್ಶನ್‌ರನ್ನು ಭೇಟಿಯಾಗದ ಪತ್ನಿ, ಕುತೂಹಲ ಮೂಡಿಸಿದ ವಿಜಯಲಕ್ಷ್ಮಿ ನಡೆ

Sampriya
ಸೋಮವಾರ, 14 ಅಕ್ಟೋಬರ್ 2024 (17:11 IST)
ಬಳ್ಳಾರಿ: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ ಬಳಿಕ ಪತ್ನಿ ವಿಜಯಲಕ್ಷ್ಮಿ ಪ್ರತಿ ಸೋಮವಾರ ಬಂದು ಪತಿಗೆ ಆತ್ಮಸ್ಥೆರ್ಯ ತುಂಬುತ್ತಿದ್ದರು. ಪತಿಯ ಆರೋಗ್ಯ ವಿಚಾರಿಸಿ, ಮುಂದಿನ ಕಾನೂನು ನಡೆಯ ಬಗ್ಗೆ ಚರ್ಚಿಸುತ್ತಿದ್ದರು.

ಎಂದಿನಂತೆ ಇಂದು ಕೂಡಾ ಪತ್ನಿ ವಿಜಯಲಕ್ಷ್ಮಿ ಅವರು ಪತಿಯನ್ನು ಭೇಟಿಯಾಗಲು ಬಳ್ಳಾರಿಗೆ ಜೈಲಿಗೆ ಬರುವುದು ನಿಗದಿಯಾಗಿತ್ತು. ಆದರೆ ಅಚ್ಚರಿಯಂತೆ ವಿಜಯಲಕ್ಷ್ಮಿ ಅವರು ಬಳ್ಳಾರಿ ಬಂದಿದ್ದರು, ಪತಿಯ ಭೇಟಿಗೆ ಜೈಲಿಗೆ ಬಾರದಿರುವುದು ಕುತೂಹಲ ಮೂಡಿಸಿದೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ದರ್ಶನ್ ಜಾಮೀನು ಅರ್ಜಿಯ ತೀರ್ಪು ಬರಲಿದೆ. ಅದಕ್ಕೂ ಮುನ್ನಾ ನಟ ಧನ್ವೀರ್, ಅಳಿಯ ಹೇಮಂತ್ ಹಾಗೂ ಸುಶಾಂತ್ ಅವರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ದರ್ಶನ್ ಅವರು ತೀವ್ರವಾದ ಬೆನ್ನುನೋವಿನಿಂದ ಬಳಲುತ್ತಿರುವುದಾಗಿ ಅವರಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೂ ಯಾವುದೇ ಕಾರಣಕ್ಕೂ ಸೋಮವಾರ ಪತಿಯ ಭೇಟಿಗೆ ಮಿಸ್ ಮಾಡದಿರುವ ಪತ್ನಿ ವಿಜಯಲಕ್ಷ್ಮಿ ನಡೆ ಕುತೂಹಲ ಮೂಡಿಸಿದೆ.

ಸಿಕ್ಕಿರುವ ಮಾಹಿತಿ ಪ್ರಕಾರ ವಿಜಯಲಕ್ಷ್ಮಿ ಅವರು ಹೊಟೇಲ್‌ನಲ್ಲಿ ತಂಗಿದ್ದು, ಅಲ್ಲಿ ದರ್ಶನ್‌ಗೆ ಜಾಮೀನು ಸಿಕ್ಕರೆ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಬಗ್ಗೆ ಪ್ಲ್ಯಾನ್ ಮಾಡಿದ್ದಾರೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಮುಂದಿನ ಕಾನೂನು ನಡೆಯ ಬಗ್ಗೆ ವಕೀಲರ ಜತೆ ಚರ್ಚಿಸಲಿದ್ದಾರೆ. ಇದೇ ಕಾರಣಕ್ಕೆ ವಿಜಯಲಕ್ಷ್ಮಿ ಹೊಟೇಲ್‌ನಲ್ಲಿ ತಂಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments