Webdunia - Bharat's app for daily news and videos

Install App

ಬಳ್ಳಾರಿಗೆ ಬಂದ್ರು, ದರ್ಶನ್‌ರನ್ನು ಭೇಟಿಯಾಗದ ಪತ್ನಿ, ಕುತೂಹಲ ಮೂಡಿಸಿದ ವಿಜಯಲಕ್ಷ್ಮಿ ನಡೆ

Sampriya
ಸೋಮವಾರ, 14 ಅಕ್ಟೋಬರ್ 2024 (17:11 IST)
ಬಳ್ಳಾರಿ: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ ಬಳಿಕ ಪತ್ನಿ ವಿಜಯಲಕ್ಷ್ಮಿ ಪ್ರತಿ ಸೋಮವಾರ ಬಂದು ಪತಿಗೆ ಆತ್ಮಸ್ಥೆರ್ಯ ತುಂಬುತ್ತಿದ್ದರು. ಪತಿಯ ಆರೋಗ್ಯ ವಿಚಾರಿಸಿ, ಮುಂದಿನ ಕಾನೂನು ನಡೆಯ ಬಗ್ಗೆ ಚರ್ಚಿಸುತ್ತಿದ್ದರು.

ಎಂದಿನಂತೆ ಇಂದು ಕೂಡಾ ಪತ್ನಿ ವಿಜಯಲಕ್ಷ್ಮಿ ಅವರು ಪತಿಯನ್ನು ಭೇಟಿಯಾಗಲು ಬಳ್ಳಾರಿಗೆ ಜೈಲಿಗೆ ಬರುವುದು ನಿಗದಿಯಾಗಿತ್ತು. ಆದರೆ ಅಚ್ಚರಿಯಂತೆ ವಿಜಯಲಕ್ಷ್ಮಿ ಅವರು ಬಳ್ಳಾರಿ ಬಂದಿದ್ದರು, ಪತಿಯ ಭೇಟಿಗೆ ಜೈಲಿಗೆ ಬಾರದಿರುವುದು ಕುತೂಹಲ ಮೂಡಿಸಿದೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ದರ್ಶನ್ ಜಾಮೀನು ಅರ್ಜಿಯ ತೀರ್ಪು ಬರಲಿದೆ. ಅದಕ್ಕೂ ಮುನ್ನಾ ನಟ ಧನ್ವೀರ್, ಅಳಿಯ ಹೇಮಂತ್ ಹಾಗೂ ಸುಶಾಂತ್ ಅವರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ದರ್ಶನ್ ಅವರು ತೀವ್ರವಾದ ಬೆನ್ನುನೋವಿನಿಂದ ಬಳಲುತ್ತಿರುವುದಾಗಿ ಅವರಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೂ ಯಾವುದೇ ಕಾರಣಕ್ಕೂ ಸೋಮವಾರ ಪತಿಯ ಭೇಟಿಗೆ ಮಿಸ್ ಮಾಡದಿರುವ ಪತ್ನಿ ವಿಜಯಲಕ್ಷ್ಮಿ ನಡೆ ಕುತೂಹಲ ಮೂಡಿಸಿದೆ.

ಸಿಕ್ಕಿರುವ ಮಾಹಿತಿ ಪ್ರಕಾರ ವಿಜಯಲಕ್ಷ್ಮಿ ಅವರು ಹೊಟೇಲ್‌ನಲ್ಲಿ ತಂಗಿದ್ದು, ಅಲ್ಲಿ ದರ್ಶನ್‌ಗೆ ಜಾಮೀನು ಸಿಕ್ಕರೆ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಬಗ್ಗೆ ಪ್ಲ್ಯಾನ್ ಮಾಡಿದ್ದಾರೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಮುಂದಿನ ಕಾನೂನು ನಡೆಯ ಬಗ್ಗೆ ವಕೀಲರ ಜತೆ ಚರ್ಚಿಸಲಿದ್ದಾರೆ. ಇದೇ ಕಾರಣಕ್ಕೆ ವಿಜಯಲಕ್ಷ್ಮಿ ಹೊಟೇಲ್‌ನಲ್ಲಿ ತಂಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments