Webdunia - Bharat's app for daily news and videos

Install App

ಪವಿತ್ರಾ ಗೌಡಗಾಗಿ ಜೈಲು ಸೇರಿದ ದರ್ಶನ್, ಇತ್ತ ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮಿ ಶತಪ್ರಯತ್ನ

Krishnaveni K
ಮಂಗಳವಾರ, 18 ಜೂನ್ 2024 (10:01 IST)
ಬೆಂಗಳೂರು: ಒಂದೆಡೆ ಪತ್ನಿ, ಇನ್ನೊಂದೆಡೆ ಗೆಳತಿ. ಗೆಳತಿಯಿಂದಾಗಿ ಜೈಲು ಸೇರಿದ ನಟ ದರ್ಶನ್ ರನ್ನು ಬಿಡಿಸಿಕೊಳ್ಳಲು ಈಗ ಪತ್ನಿ ವಿಜಯಲಕ್ಷ್ಮಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪತಿ ದರ್ಶನ್ ಪೊಲೀಸರಿಂದ ಬಂಧಿಯಾಗುತ್ತಿದ್ದಂತೇ ವಿಜಯಲಕ್ಷ್ಮಿ ತೀರಾ ಶಾಕ್ ಗೊಳಗಾಗಿದ್ದರು. ಏನಾಗುತ್ತಿದೆ ಎಂದು ತಿಳಿಯದೇ ಅವರು ಸೋಷಿಯಲ್ ಮೀಡಿಯಾದಿಂದಲೂ ದೂರವುಳಿದರು. ಪವಿತ್ರಾ ಗೌಡರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎಂಬ ಕಾರಣಕ್ಕೆ ದರ್ಶನ್ ತಮ್ಮ ಸಹಚರರೊಂದಿಗೆ ರೇಣುಕಾಸ್ವಾಮಿಗೆ ಪಾಠ ಕಲಿಸಲು ಹೋಗಿ ಆತನ ಜೀವಕ್ಕೇ ಸಂಚಕಾರ ತಂದಿಟ್ಟಿದ್ದರು.

ಪತಿಯ ಬಂಧನದಿಂದ ಆಘಾತಕ್ಕೊಳಗಾದ ವಿಜಯಲಕ್ಷ್ಮಿ ಇದುವರೆಗೆ ಸಾರ್ವನಿಕವಾಗಿ ಕಾಣಿಸಿಕೊಂಡಿಲ್ಲ. ಆದರೆ ಇದೀಗ ತಮ್ಮ ಪತಿಯ ಬಿಡುಗಡೆಗೆ ತೆರೆಮರೆಯಲ್ಲಿದ್ದುಕೊಂಡೇ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ನಟ ದರ್ಶನ್ ಈಗ ಪೊಲೀಸರ ಕಸ್ಟಡಿಯಲ್ಲಿದ್ದಾರೆ.

ಅವರು ಇನ್ನೆರಡು ದಿನಗಳಲ್ಲಿ ಮತ್ತೆ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಆಗ ಒಂದು ವೇಳೆ ನ್ಯಾಯಾಂಗ ಬಂಧನ ವಿಧಿಸಿದರೆ ಜಾಮೀನಿಗೆ ಅರ್ಜಿ ಹಾಕಬಹುದು ಎಂಬುದು ಅವರ ಪರ ವಕೀಲರ ಯೋಜನೆ. ಈ ನಡುವೆ ವಿಜಯಲಕ್ಷ್ಮಿ ಪತಿ ದರ್ಶನ್ ಕೇಸ್ ವಾದಿಸಲು ಹಿರಿಯ ವಕೀಲ ರವಿ ಬಿ ನಾಯ್ಕ್ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಖ್ಯಾತ ವಕೀಲರ ಮೂಲಕವೇ ದರ್ಶನ್ ಕೇಸ್ ವಾದಿಸಲು ವಿಜಯಲಕ್ಷ್ಮಿ ಯೋಜನೆ ರೂಪಿಸಿದ್ದಾರೆ. ಎಲ್ಲಾ ಸಾಕ್ಷ್ಯಗಳು ದರ್ಶನ್ ವಿರುದ್ಧ ಇರುವ  ಕಾರಣ ಅವರನ್ನು ಬಿಡುಗಡೆ ಮಾಡುವುದು ಅಷ್ಟು ಸುಲಭವಲ್ಲ.ಹೀಗಾಗಿ ಹಿರಿಯ ವಕೀಲರನ್ನೇ ವಿಜಯಲಕ್ಷ್ಮಿ ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments