Webdunia - Bharat's app for daily news and videos

Install App

ಗಂಡ ದರ್ಶನ್ ರಕ್ಷಣೆಗೆ ನಟ ಧನ್ವೀರ್ ಜೊತೆ ವಿಜಯಲಕ್ಷ್ಮಿ ಹೋಗಿದ್ದೆಲ್ಲಿಗೆ: ಇಲ್ಲಿದೆ ವಿಡಿಯೋ

Krishnaveni K
ಬುಧವಾರ, 9 ಅಕ್ಟೋಬರ್ 2024 (12:54 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹಂತದಲ್ಲಿರುವಾಗ ಪತ್ನಿ ವಿಜಯಲಕ್ಷ್ಮಿ ಇಂದು ದೇವರ ಮೊರೆ ಹೋಗಿದ್ದಾರೆ. ಅವರಿಗೆ ನಟ ಧನ್ವೀರ್ ಕೂಡಾ ಸಾಥ್ ನೀಡಿದ್ದಾರೆ.

ವಿಜಯಲಕ್ಷ್ಮಿ ಪತಿಯ ಬಿಡುಗಡೆಗಾಗಿ ಹೆಣಗಾಡುತ್ತಿದ್ದರೆ ಅವರಿಗೆ ಸಾಥ್ ನೀಡುತ್ತಿರುವವರು ನಟ ಧನ್ವೀರ್ ಮತ್ತು ಬಾಮೈದ ದಿನಕರ್ ತೂಗುದೀಪ. ಇಂದೂ ಕೂಡಾ ದರ್ಶನ್ ಜಾಮೀನು ಅರ್ಜಿಯ ಪ್ರತಿವಾದ ಪ್ರಕ್ರಿಯೆ ಕೋರ್ಟ್ ನಲ್ಲಿ ನಡೆಯಲಿದೆ. ಎಸ್ ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸುತ್ತಿದ್ದಾರೆ.

ಇದೀಗ ಜಾಮೀನು ಅರ್ಜಿ ವಿಚಾರ ನಿರ್ಣಾಯಕ ಹಂತದಲ್ಲಿದ್ದು ವಿಜಯಲಕ್ಷ್ಮಿ ಪತಿಯ ಒಳಿತಿಗಾಗಿ ನಾಡದೇವತೆ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆಯೂ ಕಾಡುತ್ತಿದ್ದು, ಅದೇ ವಿಚಾರವನ್ನಿಟ್ಟುಕೊಂಡು ಜಾಮೀನು ಪಡೆಯಲು ದರ್ಶನ್ ಮುಂದಾಗಬಹುದು. ಒಟ್ಟಿನಲ್ಲಿ ಇದು ದರ್ಶನ್ ಗೆ ನಿರ್ಣಾಯಕ ಸಮಯ.

ಹೀಗಾಗಿಯೇ ಇಂದು ವಿಜಯಲಕ್ಷ್ಮಿ ದರ್ಶನ್ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಗಂಡನ ಬಿಡುಗಡೆಗಾಗಿ ಪ್ರಾರ್ಥನೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಬೆಂಗಾವಲಾಗಿ ಧನ್ವೀರ್ ಕೂಡಾ ಸಾಥ್ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments