Select Your Language

Notifications

webdunia
webdunia
webdunia
webdunia

ಅಮ್ಮನ ಹೆಗಲು ಹಿಡಿದು ಅಪ್ಪ ದರ್ಶನ್‌ ನೋಡಲು ಜೈಲಿಗೆ ಬಂದ ವಿನೀಶ್

ಅಮ್ಮನ ಹೆಗಲು ಹಿಡಿದು ಅಪ್ಪ ದರ್ಶನ್‌ ನೋಡಲು ಜೈಲಿಗೆ ಬಂದ ವಿನೀಶ್

Sampriya

ಬಳ್ಳಾರಿ , ಗುರುವಾರ, 3 ಅಕ್ಟೋಬರ್ 2024 (17:02 IST)
ಬಳ್ಳಾರಿ: ನಟ ದರ್ಶನ್‌ರನ್ನು ನೋಡಲು ಬಳ್ಳಾರಿ ಜೈಲಿಗೆ ಪುತ್ರ ವಿನೀಶ್ ಮೊದಲ ಬಾರಿ ತಾಯಿ ಜತೆ ಆಗಮಿಸಿದ್ದಾನೆ.

ವಿಐಪಿ ಟ್ರೀಟ್‌ಮೆಂಟ್ ಪಡೆದ ಹಿನ್ನೆಲೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪರಪ್ಪನ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸಂದರ್ಭ ವಿನೇಶ್ ತನ್ನ ತಾಯಿ ಜತೆ ಹಲವು ಬಾರಿ ಅಪ್ಪನನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದ.

ಆದರೆ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಮೊದಲ ಬಾರಿ ವಿನೇಶ್ ಅಪ್ಪನನ್ನು ನೋಡಲು ಬಂದಿದ್ದಾನೆ. ಸೋಮವಾರ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್, ಆಪ್ತ ಧನ್ವೀರ್ ಅವರು ದರ್ಶನ್ ಭೇಟಿಯಾಗಿ ಅವರು ಮಾತುಕತೆ ನಡೆಸಿದ್ದರು.

ಅದರ ಬೆನ್ನಲ್ಲೇ ಇದೀಗ ಮಗನ ಜತೆ ವಿಜಯಲಕ್ಷ್ಮೀ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಪ್ಪನ ಅಗ್ರಹಾರದಲ್ಲಿ ವಿಐಪಿ ಟ್ರೀಟ್‌ಮೆಂಟ್ ಪಡೆದ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ