Webdunia - Bharat's app for daily news and videos

Install App

ಸಾಯಿ ಪಲ್ಲವಿ ಹೇಳಿಕೆಯಿಂದ ವಿರಾಟ ಪರ್ವಂ ಗಳಿಕೆಗೆ ನಷ್ಟವಾಯ್ತಾ?

Webdunia
ಭಾನುವಾರ, 19 ಜೂನ್ 2022 (08:50 IST)
ಹೈದರಾಬಾದ್: ಸಾಯಿ ಪಲ್ಲವಿ-ರಾಣಾ ದಗ್ಗುಬಟ್ಟಿ ಅಭಿನಯದ ವಿರಾಟ ಪರ್ವಂ ಮೊನ್ನೆಯಷ್ಟೇ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾ ಬಿಡುಗಡೆಗೆ ಕೆಲವೇ ಕ್ಷಣಗಳ ಮೊದಲು ಸಾಯಿ ಪಲ್ಲವಿ ನೀಡಿದ್ದ ಹೇಳಿಕೆ ಚಿತ್ರದ ಗಳಿಕೆಗೆ ತೊಂದರೆ ಮಾಡಿತಾ ಎಂಬ ಅನುಮಾನ ಮೂಡಿದೆ.

ನಕ್ಸಲೈಟ್ ಗಳ ಕತೆಯಾಧಾರಿತ ಸಿನಿಮಾ ‘ವಿರಾಟ ಪರ್ವಂ’. ಈ ಸಿನಿಮಾದ ಟ್ರೈಲರ್ ಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಆದರೆ ಬಿಡುಗಡೆ ಹಿಂದಿನ ದಿನ ಸಾಯಿ ಪಲ್ಲವಿ ಕಾಶ್ಮೀರ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಮಾಡಿದವರ ಹತ್ಯೆ ಒಂದೇ ಎಂದು ಹೇಳಿಕೆ ನೀಡಿದ್ದರು.

ಆದರೆ ಈ ಹೇಳಿಕೆ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಕಾರಣಕ್ಕೆ ಬಾಯ್ಕಾಟ್ ವಿರಾಟ ಪರ್ವಂ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಕೂಡಾ ಆಗಿತ್ತು. ಇದರ ಬೆನ್ನಲ್ಲೇ ಚಿತ್ರ ಮೊದಲ ದಿನ ಆಂಧ್ರದಲ್ಲಿ ಕೇವಲ 5 ಕೋಟಿ ರೂ. ಗಳಿಕೆ ಮಾಡಿದೆ ಎಂಬ ಸುದ್ದಿಯಿದೆ. ಹೀಗಾಗಿ ಗಲ್ಲಾಪೆಟ್ಟಿಗೆಯಲ್ಲಿ ವಿರಾಟ ಪರ್ವಂ ಕೊಂಚ ಹಿನ್ನಡೆ ಅನುಭವಿಸಿದೆ ಎಂದೇ ಹೇಳಬಹುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments