Select Your Language

Notifications

webdunia
webdunia
webdunia
webdunia

ಕೊಟ್ಟ ಮಾತು ಉಳಿಸಿಕೊಳ್ಳಲು ಪುನೀತ್ ಮನೆಗೆ ಭೇಟಿ ಕೊಟ್ಟ ನಟ ವಿಶಾಲ್

ಕೊಟ್ಟ ಮಾತು ಉಳಿಸಿಕೊಳ್ಳಲು ಪುನೀತ್ ಮನೆಗೆ ಭೇಟಿ ಕೊಟ್ಟ ನಟ ವಿಶಾಲ್
ಬೆಂಗಳೂರು , ಬುಧವಾರ, 17 ನವೆಂಬರ್ 2021 (17:01 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಓದಿಸುತ್ತಿದ್ದ ಬಡ ಮಕ್ಕಳ ಶಿಕ್ಷಣ ಜವಾಬ್ಧಾರಿಯನ್ನು ನಾನು ಹೊರುತ್ತೇನೆ ಎಂದಿದ್ದ ಟಾಲಿವುಡ್ ನಟ ವಿಶಾಲ್ ಈಗ ಆ ಮಾತು ಉಳಿಸಿಕೊಳ್ಳಲು ಮುಂದಾಗಿದ್ದಾರೆ.

ನಿನ್ನೆ ಪುನೀತ್ ನಮನ ಕಾರ್ಯಕ್ರಮದಲ್ಲಿ ಇದೇ ಮಾತನ್ನು ಪುನರುಚ್ಚರಿಸಿದ್ದ ವಿಶಾಲ್, ಇಂದು ಪುನೀತ್ ನಿವಾಸಕ್ಕೆ ಭೇಟಿ ನೀಡಿ ಈ ಕುರಿತು ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಿದ್ದಾರೆ.

ಮೈಸೂರಿನ ಶಕ್ತಿಧಾಮದ ಜವಾಬ್ಧಾರಿ ತಮಗೆ ನೀಡುವಂತೆ ವಿಶಾಲ್ ಕೇಳಿಕೊಂಡಿದ್ದಾರೆ. ಈ ಬಗ್ಗೆ ಅಶ್ವಿನಿ ಪುನೀತ್ ಹಾಗೂ ಶಿವರಾಜ್ ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಕೆಲವು ದಿನಗಳ ಬಳಿಕ ಈ ಬಗ್ಗೆ ನಿರ್ಧಾರ ಮಾಡೋಣ ಎಂದು ಅಶ್ವಿನಿ ಪುನೀತ್ ಹೇಳಿರುವುದಾಗಿ ವಿಶಾಲ್ ಬಳಿಕ ಮಾಧ್ಯಮಗಳಿಗೆ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಕುರಿತು ವಿವಾದಿತ ಹೇಳಿಕೆ:ವೀರ್ ದಾಸ್ ವಿರುದ್ಧ ದೂರು ದಾಖಲು