Webdunia - Bharat's app for daily news and videos

Install App

ಸತ್ತು ಸಮಾಧಿಯಾದರೂ ಸಾಹಸಸಿಂಹ ವಿಷ್ಣುವರ್ಧನ್ ಗೆ ನೋವು ತಪ್ಪಲಿಲ್ಲ: ಅಭಿಮಾನ್ ಸ್ಟುಡಿಯೋದಲ್ಲಿ ಹೈಡ್ರಾಮಾ

Krishnaveni K
ಬುಧವಾರ, 18 ಸೆಪ್ಟಂಬರ್ 2024 (14:25 IST)
Photo Credit: Facebook
ಬೆಂಗಳೂರು: ಸಾಹಸಸಿಂಹ ಡಾ ವಿಷ್ಣುವರ್ಧನ್ ಜನ್ಮಜಯಂತಿ ಇಂದು. ಆದರೆ ಬದುಕಿದ್ದಾಗ ಸಾಕಷ್ಟು ನೋವು ಅನುಭವಿಸಿದ್ದ ವಿಷ್ಣುದಾದಗೆ ಸತ್ತು ಸ್ವರ್ಗ ಸೇರಿದ ಮೇಲೂ ನೋವು ತಪ್ಪಿಲ್ಲ ಎಂಬುದಕ್ಕೆ ಇಂದಿನ ಘಟನೆಯೇ ಸಾಕ್ಷಿಯಾಯಿತು.

ಇಂದು ವಿಷ್ಣುವರ್ಧನ್ ಜನ್ಮ ಜಯಂತಿ ನಿಮಿತ್ತ ಅವರನ್ನು ಮಣ್ಣು ಮಾಡಿದ್ದ ಅಭಿಮಾನ್ ಸ್ಟುಡಿಯೋದಲ್ಲಿ ಪೂಜೆ ಸಲ್ಲಿಸಲು ಅಭಿಮಾನಿಗಳ ದಂಡೇ ಹರಿದುಬಂದಿತ್ತು. ಆದರೆ ಈ ಜಾಗದ ಮಾಲಿಕರಾದ ಹಿರಿಯ ನಟ, ದಿವಂಗತ ಬಾಲಣ್ಣನವರ ಮಕ್ಕಳು ಅಭಿಮಾನಿಗಳ ಪೂಜೆಗೆ ಅವಕಾಶ ಕೊಟ್ಟಿಲ್ಲ.

ಈ ಭೂಮಿ ವಿವಾದದಿಂದ ಬೇಸತ್ತು ಈಗಾಗಲೇ ವಿಷ್ಣುವರ್ಧನ್ ಕುಟುಂಬ ಅವರ ಚಿತಾಭಸ್ಮವನ್ನು ಮೈಸೂರಿಗೆ ತೆಗೆದುಕೊಂಡು ಹೋಗಿ ಅಲ್ಲಿ ಬೃಹತ್ ಸ್ಮಾರಕವನ್ನೇ ನಿರ್ಮಾಣ ಮಾಡಿಕೊಂಡಿದ್ದಾರೆ. ವಿಷ್ಣುವರ್ಧನ್ ಕುಟುಂಬಸ್ಥರು ಏನೇ ಪೂಜೆ ಮಾಡುವುದಿದ್ದರೂ ಈಗ ಇಲ್ಲಿಯೇ ಮಾಡಿಕೊಳ್ಳುತ್ತಾರೆ.

ಆದರೆ ಅವರ ಅಭಿಮಾನಿಗಳು ಈಗಲೂ ಬಾಲಣ್ಣ ಮಕ್ಕಳ ಒಡೆತನದಲ್ಲಿರುವ ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋ ಜಾಗದಲ್ಲೇ  ಪೂಜೆ ಮಾಡುತ್ತಿದ್ದಾರೆ. ಅದರೆ ಇದಕ್ಕೆ ಬಾಲಣ್ಣ ಮಕ್ಕಳು ತಡೆಯಾಗಿದ್ದಾರೆ. ಇಂದೂ ಕೂಡಾ ಅಭಿಮಾನಿಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕೊಟ್ಟಿಲ್ಲ. ಇದರಿಂದ ಬೇಸರಗೊಂಡ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ ಮತ್ತು ಪ್ರತಿಭಟನೆಯನ್ನೂ ನಡೆಸಿದರು. ಬದುಕಿದ್ದಾಗ ವಿಷ್ಣುವರ್ಧನ್ ಗೆ ಸಾಕಷ್ಟು ಅವಮಾನ, ನೋವು ಕೊಟ್ಟರು. ಈಗ ಸತ್ತ ಮೇಲೂ ಅವರಿಗೆ ನೆಮ್ಮದಿಯಿಲ್ಲ ಎಂದು ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments