Webdunia - Bharat's app for daily news and videos

Install App

ಸತತ ಮೂರನೇ ವರ್ಷವೂ ವಿಷ್ಣುವರ್ಧನ್ ಸಮಾಧಿ ಬಳಿ ಬಾರದ ಕುಟುಂಬ

Webdunia
ಸೋಮವಾರ, 31 ಡಿಸೆಂಬರ್ 2018 (10:32 IST)
ಬೆಂಗಳೂರು: ನಿನ್ನೆ ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯ ತಿಥಿ. ಈ ಸಂದರ್ಭದಲ್ಲಿ ಮತ್ತೆ ವಿಷ್ಣು ಅಭಿಮಾನಿಗಳು ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಸ್ಮಾರಕಕ್ಕೆ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ್ದಾರೆ.


ಆದರೆ ವಿಷ್ಣು ಕುಟುಂಬ ಸತತ ಮೂರನೇ ವರ್ಷವೂ ಸಮಾಧಿ ಬಳಿಗೆ ಬರದೇ ಮನೆಯಲ್ಲಿಯೇ ಪೂಜೆ ಸಲ್ಲಿಸಿದೆ. ವಿಷ್ಣು ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದ ಅಸಮಾಧಾನದಿಂದಾಗಿ ವಿಷ್ಣು ಕುಟುಂಬ ಮೂರು ವರ್ಷಗಳಿಂದ ಮನೆಯಲ್ಲಿಯೇ ಪೂಜೆ ಸಲ್ಲಿಸುತ್ತಿದೆ.

ವಿಷ್ಣು ಸ್ಮಾರಕ ಮೈಸೂರಿನಲ್ಲಿ ಆಗಬೇಕೋ, ಈಗಿರುವ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲೇ ಆಗಬೇಕೋ ಎಂಬ ಬಗ್ಗೆ ಅಭಿಮಾನಿಗಳು, ವಿಷ್ಣು ಕುಟುಂಬದ ನಡುವೆ ಅಭಿಪ್ರಾಯ ಬೇಧವಿದೆ. ಇದೀಗ ಮತ್ತೆ ಆ ವಿಚಾರವಾಗಿ ಮಾತನಾಡಿರುವ ವಿಷ್ಣು ಅಳಿಯ ಅನಿರುದ್ಧ್ ಅಭಿಮಾನಿಗಳ ಜತೆ ನಮಗೆ ಭಿನ್ನಾಬಿಪ್ರಾಯವಿಲ್ಲ. ಸ್ಮಾರಕ ಸಮಸ್ಯೆ ವಿವಾದ ಬಗೆ ಹರಿಯಬಹುದು ಎಂಬ ವಿಶ್ವಾಸವಿದೆ ಎಂದಿದ್ದಾರೆ. ಇಷ್ಟು ದಿನ ಕಾದಿದ್ದೇವೆ. ಇನ್ನೂ ಸ್ವಲ್ಪ ದಿನ ಕಾಯುವುದಕ್ಕೆ ಅಭ್ಯಂತರವಿಲ್ಲ ಎಂದು ಅನಿರುದ್ಧ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments