Webdunia - Bharat's app for daily news and videos

Install App

ತಲೈವಾ ನೋಡಲು ಹಿಮಾಲದವರೆಗೆ ಕಾಲ್ನಡಿಗೆ!,

Webdunia
ಗುರುವಾರ, 17 ಆಗಸ್ಟ್ 2023 (17:01 IST)
ಸೂಪರ್‌ಸ್ಟಾರ್ ರಜನಿಕಾಂತ್ ಅವರು ದಿನದಿಂದ ದಿನಕ್ಕೆ ತಮ್ಮ ಅಭಿಮಾನಿಗಳ ಸಂಖ್ಯೆಯನ್ನು ಏರಿಸಿಕೊಳ್ಳುತ್ತಲೇ ಹೋಗುತ್ತಿದ್ದಾರೆ. ಇತ್ತ ಅವರ ಅಭಿನಯದ ಜೈಲರ್​ ಚಿತ್ರ ಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆಯುತ್ತಿದ್ದರೆ, ಅತ್ತ ರಜನಿಕಾಂತ್ ಹಿಮಾಲಯ ಪ್ರವಾಸದಲ್ಲಿದ್ದಾರೆ. ಇವರು ಹಿಮಾಲಯಕ್ಕೆ ಭೇಟಿ ನೀಡುವುದನ್ನು ತಿಳಿದ ಅಭಿಮಾನಿಯೊಬ್ಬರು ತಮ್ಮ ನೆಚ್ಚಿನ ನಟನನ್ನು ನೋಡಲು 55 ದಿನಗಳವರೆಗೆ ಪಾದಯಾತ್ರೆ ಮಾಡಿ ಹಿಮಾಲಯವನ್ನು ತಲುಪಿದ್ದಾರೆ. 55 ದಿನಗಳ ಕಾಲ ಚೆನ್ನೈನಿಂದ ಉತ್ತರಾಖಂಡಕ್ಕೆ ನಡೆದುಕೊಂಡು ಹೋಗಿರುವ ಈ ಅಭಿಮಾನಿಗೆ, ರಜನಿಕಾಂತ್ ಅವರನ್ನು ಭೇಟಿಯಾಗುವ ಸೌಭಾಗ್ಯ ಒದಗಿ ಬಂದಿದೆ. ರಜನಿಕಾಂತ್ ಅವರನ್ನು ಭೇಟಿಯಾಗಿರುವ ವ್ಯಕ್ತಿಯ ಹೆಸರು ರಾ.ಅರ್ಜುನಮೂರ್ತಿ. ಉತ್ತರಾಖಂಡದಲ್ಲಿ ರಜನಿ ಅವರನ್ನು ಭೇಟಿಯಾದ ನಂತರ ಅವರು ಚಿತ್ರವನ್ನು ಹಂಚಿಕೊಂಡಿದ್ದಾರೆ. ರಜನಿಕಾಂತ್ ಅವರನ್ನು ಭೇಟಿಯಾಗಲು ತಾವು ಚೆನ್ನೈನಿಂದ ಉತ್ತರಾಖಂಡದ ಮಹಾವತಾರ್ ಬಾಬಾಜಿಯ ಗುಹೆಗೆ 55 ದಿನಗಳ ಕಾಲ ನಡೆದು ಬಂದಿರುವುದಾಗಿ ತಿಳಿಸಿದ್ದಾರೆ. ತಮ್ಮನ್ನು ಭೇಟಿಯಾಗಲು ಬರುತ್ತಿರುವ ವಿಷಯ ತಿಳಿಯುತ್ತಲೇ ರಜನೀಕಾಂತ್​ ಅವರು, ಅಭಿಮಾನಿಯನ್ನು ಭೇಟಿಯಾಗಿ ಅವರ ಜೊತೆ ಮಾತುಕತೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments