Select Your Language

Notifications

webdunia
webdunia
webdunia
webdunia

ನೋವಿನ ಜತೆ ಬದುಕೋಕೆ ಶಕ್ತಿಕೊಡು ಎಂದು ದೇವರಲ್ಲಿ ಕೇಳಿಕೊಳ್ಳಬೇಕಷ್ಟೆ; ರಾಘಣ್ಣ

ನೋವಿನ ಜತೆ ಬದುಕೋಕೆ ಶಕ್ತಿಕೊಡು ಎಂದು ದೇವರಲ್ಲಿ ಕೇಳಿಕೊಳ್ಳಬೇಕಷ್ಟೆ; ರಾಘಣ್ಣ
ಬೆಂಗಳೂರು , ಮಂಗಳವಾರ, 2 ನವೆಂಬರ್ 2021 (16:36 IST)
ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಪೈಕಿ ಕಿರಿಯವರು ಪುನೀತ್. ಅವರಿಗೆ 46 ವರ್ಷ ವಯಸ್ಸಾಗಿತ್ತು.
ಆದರೆ, ದೇವರು ಮೊದಲು ಕರೆದುಕೊಂಡಿದ್ದು ಪುನೀತ್ ಅವರನ್ನು. ಮನೆಯ ಕಿರಿಯ ಮಗ ಮೊದಲು ಹೋದನಲ್ಲ ಎನ್ನುವ ಕೊರಗು ಹಾಗೂ ದುಃಖ ರಾಜ್ಕುಮಾರ್ ಕುಟುಂಬವನ್ನು ಬಿಟ್ಟೂಬಿಡದೆ ಕಾಡುತ್ತಿದೆ. ಇನ್ನೂ ಸಾಧನೆ ಮಾಡುತ್ತಿರುವ ವಯಸ್ಸಿನಲ್ಲೇ ಅವರು ನಿಧನ ಹೊಂದಿದ್ದು ನಿಜಕ್ಕೂ ಬೇಸರದ ಸಂಗತಿ. ಆದರೆ, ಈ ನೋವಿನ ಜತೆ ಕುಟುಂಬ ಜೀವನ ನಡೆಸಿಕೊಂಡು ಹೋಗಬೇಕಿದೆ. ಇದೇ ಮಾತನ್ನು ರಾಘವೇಂದ್ರ ರಾಜ್ಕುಮಾರ್ ಹೇಳಿದ್ದಾರೆ.
ಪುನೀತ್ ಅವರನ್ನು ಮಣ್ಣು ಮಾಡಿ ಇಂದಿಗೆ (ನವೆಂಬರ್ 2) ಮೂರನೇ ದಿನ. ಹೀಗಾಗಿ, ಪುನೀತ್ ಕುಟುಂಬದವರು ಕಂಠೀರವ ಸ್ಟುಡಿಯೋಗೆ ಬಂದು ಪುನೀತ್ ಸಮಾಧಿಗೆ ಹಾಲು-ತುಪ್ಪ ಹಾಕಿ ಬಂದಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಕೂಡ ಇದರಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಮಾತನಾಡಿದ ಅವರು ‘ಈ ನೋವಿನ ಜತೆ ಬದುಕೋಕೆ ಶಕ್ತಿಕೊಡು ಎಂದು ದೇವರಲ್ಲಿ ಕೇಳಿಕೊಳ್ಳಬೇಕಷ್ಟೆ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಕಾಣಿಸುತ್ತಿದೆ ಒಗ್ಗಟ್ಟಿನ ದರ್ಶನ