ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬಕ್ಕೆ ಬರುವ ಅಭಿಮಾನಿಗಳಿಗೆ ಹಾಕಿದ ಕಂಡೀಷನ್ ಏನು ಗೊತ್ತಾ?

Webdunia
ಬುಧವಾರ, 29 ಆಗಸ್ಟ್ 2018 (06:52 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಈ ಸಲ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳಲು ನಿರ್ಧಾರ ಮಾಡುವುದರ ಮೂಲಕ ತಮ್ಮ ಅಭಿಮಾನಿಗಳಿಗೆ  ಸಿಹಿಸುದ್ದಿ ನೀಡಿದ್ದಾರೆ.


ಹೌದು. ಕಳೆದ ವರ್ಷ ಸುದೀಪ್  ಹುಟ್ಟು ಹಬ್ಬವನ್ನು  ಆಚರಿಸಿಕೊಂಡಿರಲಿಲ್ಲ. ಇದರಿಂದ ಅಭಿಮಾನಿಗಳು ಬೇಸರಗೊಂಡಿದ್ದರು. ಆದರೆ ಈ ಸಲ ಸೆಪ್ಟಂಬರ್ 2 ರಂದು ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಅದರ ಜೊತೆಗೆ ಅಭಿಮಾನಿಗಳಿಗೆ ಕೆಲವು ಕಂಡೀಷನ್ ಗಳನ್ನು ಕೂಡ ಹಾಕಿದ್ದಾರೆ.


ಅದೇನೆಂದರೆ ಸೆಪ್ಟಂಬರ್ 2 ಕ್ಕೆ ಕಿಚ್ಚ ಸುದೀಪ್ ಹುಟ್ಟುಹಬ್ಬ ಸಂಭ್ರಮಕ್ಕೆ ಅಂತ ಬರುವ ಯಾರೊಬ್ಬರು ಕೇಕು, ಹೂವಿನ ಹಾರ, ಶಾಲು, ಗಿಫ್ಟ್‌ಗಳನ್ನು ಯಾವ ಕಾರಣಕ್ಕೂ ತರಬಾರದು. ಒಂದೇ ಒಂದೇ ಕೇಕು ಕೂಡ ಕಾಣಬಾರದು. ಬರೀ ಕೈಯಲ್ಲಿ ಬಂದು ವಿಶ್ ಮಾಡಿ ಎಂದು ಸುದೀಪ್ ಹೇಳಿದ್ದಾರೆ. ಇದಕ್ಕೆ ಎಲ್ಲರೂ ಒಪ್ಪಿಕೊಂಡಿದ್ದಾರಂತೆ.


ಹಾಗೇ ತಮ್ಮ ಹುಟ್ಟುಹಬ್ಬದ ಸಂಭ್ರಮದ ನೆಪದಲ್ಲಿ ಇಂಥ ಅನಗತ್ಯ ವೆಚ್ಚ ಮಾಡುವ ಬದಲು ಅದೇ ಹಣವನ್ನು ರಾಜ್ಯದಲ್ಲಿರುವ ಎಲ್ಲ ತನ್ನ ಅಭಿಮಾನಿ ಸಂಘಗಳು ಒಂದು ದಿನವಾದರೂ ಹಸಿದವರಿಗೆ ವೆಚ್ಚ ಮಾಡಿಲಿ, ಕೊಡಗು ಸಂಕಷ್ಟಕ್ಕೆ ನೆರವಾಗುವಂತೆ ವೆಚ್ಚ ಮಾಡಲಿ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ನಮ್ ಬಾಸ್ ನೋಡ್ಬಹುದು..: ದರ್ಶನ್ ಗೆ ಕೋರ್ಟ್ ಚಿಂತೆಯಾದ್ರೆ ಫ್ಯಾನ್ಸ್ ಗೆ ಇನ್ನೇನೋ ಚಿಂತೆ

ಸಂತಾನೋತ್ಪತ್ತಿ ಸಂಗೀತ..ಕಾಂತಾರ ಚಾಪ್ಟರ್ 1 ಭಾಷಾಂತರ ಅವಾಂತರ

ಬರ್ತಡೇ ದಿನ ನಟ ಶಾರುಖ್‌ ಖಾನ್‌ಗೆ ಸಂಸದ ಶಶಿ ತರೂರ್‌ ಹೇಗೇ ಕಾಲೆಳೆಯುವುದಾ

ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್​ಗೆ 60ರ ಸಂಭ್ರಮ: ಮನೆಮುಂದೆ ಅಭಿಮಾನಿಗಳ ಜಾತ್ರೆ

ಮುಂದಿನ ಸುದ್ದಿ
Show comments