Webdunia - Bharat's app for daily news and videos

Install App

ಜೈಲು ಸಿಬ್ಬಂದಿ ಬಳಿ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಕೇಳಿ ದರ್ಶನ್ ಮಾಡಿದ ಪ್ರತಿಜ್ಞೆಯೇನು ಗೊತ್ತಾ

Krishnaveni K
ಗುರುವಾರ, 19 ಸೆಪ್ಟಂಬರ್ 2024 (14:33 IST)
ಬಳ್ಳಾರಿ: ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಬಳ್ಳಾರಿ ಜೈಲಿನ ಸಿಬ್ಬಂದಿಗಳ ಜೊತೆ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಕೇಳಿ ತಿಳಿದುಕೊಂಡು ಪ್ರತಿಜ್ಞೆಯೊಂದನ್ನು ಮಾಡಿದ್ದಾರಂತೆ.

ಬಳ್ಳಾರಿ ಜೈಲಿನಲ್ಲಿ ಏಕಾಂಗಿಯಾಗಿರುವ ನಟ ದರ್ಶನ್ ಜೈಲು ಸಿಬ್ಬಂದಿಗಳ ಜೊತೆ ಮನಬಿಚ್ಚಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಕೊಲೆ ನಾನು ಮಾಡಿಲ್ಲ. ಏನಾಗುತ್ತದೋ ಎಲ್ಲಾ ಆ ದೇವರು ನೊಡಿಕೊಳ್ತಾನೆ ಎಂದಿದ್ದಾರಂತೆ ದರ್ಶನ್. ಅಲ್ಲದೆ ಜೈಲು ಸಿಬ್ಬಂದಿಗಳ ಜೊತೆ ಮತ್ತು ತಮ್ಮನ್ನು ಭೇಟಿಯಾಗಲು ಬಂದ ಪತ್ನಿ ವಿಜಯಲಕ್ಷ್ಮಿ ಜೊತೆಗೂ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಕೇಳಿ ತಿಳಿದುಕೊಂಡಿದ್ದಾರೆ.

ನಾನು ಇಲ್ಲಿಂದ ಹೊರಗೆ ಹೋದ ಮೇಲೆ ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿಯಾಗುತ್ತೇನೆ, ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ದರ್ಶನ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿಂದೆಯೂ ದರ್ಶನ್ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ವಿಚಾರಿಸಿಕೊಂಡಿದ್ದರು ಎಂದು ಸುದ್ದಿಯಾಗಿತ್ತು.

100 ದಿನಗಳಿಂದ ಜೈಲಿನಲ್ಲಿರುವ ನಟ ದರ್ಶನ್ ಗೆ ಈಗ ಪಶ್ಚಾತ್ತಾಪ ಕಾಡಲಾರಂಭಿಸಿದೆ. ರೇಣುಕಾಸ್ವಾಮಿ ತನ್ನ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ. ಆದರೆ ಆತನನ್ನು ಕಳೆದುಕೊಂಡ ಮೇಲೆ ಆತನ ಗರ್ಭಿಣಿ ಪತ್ನಿ, ವಯಸ್ಸಾದ ತಂದೆ-ತಾಯಿ ಅಸಹಾಯಕರಾಗಿದ್ದಾರೆ. ಇದೀಗ ಅವರಿಗೆ ಸಹಾಯ ಮಾಡಲು ಸಿದ್ಧ ಎಂದು ದರ್ಶನ್ ಹೇಳಿರುವುದಾಗಿ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments