Webdunia - Bharat's app for daily news and videos

Install App

ಮಧ್ಯಂತರ ಜಾಮೀನು ಸಿಕ್ಕರೆ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಬಹುದೇ ಇಲ್ಲಿದೆ ಉತ್ತರ

Krishnaveni K
ಬುಧವಾರ, 30 ಅಕ್ಟೋಬರ್ 2024 (08:51 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಇಂದು ಮಧ್ಯಂತರ ಜಾಮೀನು ಸಿಗುವ ನಿರೀಕ್ಷೆಯಿದೆ. ಆದರೆ ಮಧ್ಯಂತರ ಜಾಮೀನು ಸಿಕ್ಕರೆ ದರ್ಶನ್ ಏನೆಲ್ಲಾ ಮಾಡಬಹುದು, ಏನು ಮಾಡಬಾರದು ಇಲ್ಲಿದೆ ವಿವರ.

ಮುಖ್ಯವಾಗಿ ದರ್ಶನ್ ನಂಬಿಕೊಂಡು ಬಂಡವಾಳ ಹೂಡಿರುವ ನಿರ್ಮಾಪಕರಿಗೆ ಈಗ ತಮ್ಮ ಸಿನಿಮಾ ಮುಗಿಸುವುದೇ ಚಿಂತೆಯಾಗಿದೆ. ಆದರೆ ಮಧ್ಯಂತರ ಜಾಮೀನು ಸಿಕ್ಕರೆ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಬಹುದೇ ಎಂಬ ಉತ್ತರಗಳಿಗೆ ಇಂದು ಕೋರ್ಟ್ ನೀಡುವ ಕಾರಣಗಳು ಮುಖ್ಯವಾಗಲಿದೆ.

ದರ್ಶನ್ ಅನಾರೋಗ್ಯದ ನೆಪವೊಡ್ಡಿ ಈಗ ಮಧ್ಯಂತರ ಜಾಮೀನಾದರೂ ನೀಡಿ ಎಂದು ಅವರ ಪರ ವಕೀಲರು ವಾದ ಮಂಡಿಸಿದ್ದರು. ಇದು ಪೂರ್ಣ ಪ್ರಮಾಣದ ಜಾಮೀನು ಆಗಿರಲ್ಲ. ಮಧ್ಯಂತರ ಜಾಮೀನು ಎಂದರೆ ಯಾವುದಾದರೂ ಉದ್ದೇಶಕ್ಕೆ ನೀಡುವುದಾಗಿರುತ್ತದೆ. ಇದೀಗ ದರ್ಶನ್ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಯ ಅಗತ್ಯದ ಬಗ್ಗೆ ಹೇಳಿರುವುದರಿಂದ ಸದ್ಯಕ್ಕೆ ಶಸ್ತ್ರಚಿಕಿತ್ಸೆ ಮುಗಿಸಿ ಮತ್ತೆ ಕೋರ್ಟ್ ಗೆ ಶರಣಾಗಬೇಕಾದೀತು.

ಒಂದು ವೇಳೆ ಪೂರ್ಣಾವಧಿ ಜಾಮೀನು ಸಿಕ್ಕರೆ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಬಹುದು. ಆದರೆ ಮಧ್ಯಂತರ ಜಾಮೀನು ಎಂದರೆ ಕಾಲ ಕಾಲಕ್ಕೆ ಅವರು ಆರೋಗ್ಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿರಬೇಕು. ತಮ್ಮ ಪಾಸ್ ಪೋರ್ಟ್ ಗಳನ್ನು ಸರೆಂಡರ್ ಮಾಡಬೇಕು. ಪೊಲೀಸರ ಅನುಮತಿ ಇಲ್ಲದೇ ನಗರ ಬಿಟ್ಟು ತೆರಳುವಂತಿಲ್ಲ. ನಿಯಮಿತವಾಗಿ ಪೊಲೀಸ್ ಠಾಣೆಗೆ ಬಂದು ಹಾಜರಾತಿ ಹಾಕುತ್ತಿರಬೇಕು. ಇನ್ನು, ಸಾಕ್ಷಿದಾರರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭೇಟಿ ಮಾಡಿ ಪ್ರಭಾವ ಬೀರುವಂತಿಲ್ಲ. ಈ ಅವಧಿಯಲ್ಲಿ ಅವರು ಯಾರಿಗೂ ಧಮ್ಕಿ ಹಾಕುವುದು ಅಥವಾ ಇದೀಗ ಆರೋಪಿಯಾಗಿರುವಂತಹದ್ದೇ ಪ್ರಕರಣದಲ್ಲಿ ಭಾಗಿಯಾಗುವಂತಿಲ್ಲ. ಇವಿಷ್ಟು ಷರತ್ತುಗಳ ಮೇಲೆಯೇ ಮಧ್ಯಂತರ ಜಾಮೀನು ನೀಡಲಾಗುತ್ತದೆ. ಶಸ್ತ್ರ ಚಿಕಿತ್ಸೆ ಮುಗಿದು ಗುಣಮುಖರಾದ ನಂತರ ತಕ್ಷಣವೇ ಅವರು ಕೋರ್ಟ್ ಮುಂದೆ ಶರಣಾಗಲು ಇಂದು ನ್ಯಾಯಾಧೀಶರು ಆದೇಶ ನೀಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments