Webdunia - Bharat's app for daily news and videos

Install App

ರೇಣುಕಾಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡಗೆ ಕಾಲ್ ಮಾಡಿದ್ದ ದರ್ಶನ್ ಹೇಳಿದ್ದೇನು

Krishnaveni K
ಶುಕ್ರವಾರ, 6 ಸೆಪ್ಟಂಬರ್ 2024 (14:26 IST)
Photo Credit: Facebook
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಈಗಷ್ಟೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ದರ್ಶನ್ ತನ್ನ ಪ್ರೇಯಸಿ ಪವಿತ್ರಾ ಗೌಡಗೆ ಕರೆ ಮಾಡಿ ಹೇಳಿದ್ದೇನು ಎಂಬುದು ಈಗ ಬಯಲಾಗಿದೆ.
 

ದರ್ಶನ್ ಆಂಡ್ ಗ್ಯಾಂಗ್ ನ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡು ಡಿಲೀಟ್ ಆದ ಅಂಶಗಳನ್ನು ರಿಟ್ರೀವ್ ಮಾಡಿದೆ. ದರ್ಶನ್ ಆಂಡ್ ಗ್ಯಾಂಗ್ ಕೊಲೆ ಬಳಿಕ ಯಾರಿಗೆಲ್ಲಾ ಕರೆ ಮಾಡಿದ್ದರು ಎಂಬ ಅಂಶಗಳೂ ಈಗ ಬಯಲಾಗಿದೆ. ಇದೀಗ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಸಂಭಾಷಣೆ ಏನಿತ್ತು ಎಂಬುದು ಬಯಲಾಗಿದೆ.

ರೇಣುಕಾಸ್ವಾಮಿ ಹತ್ಯೆಯ ಬಳಿಕ ದರ್ಶನ್ ಆಂಡ್ ಗ್ಯಾಂಗ್ ಗೆ ಟೆನ್ಷನ್ ಶುರುವಾಗಿದೆ. ಈ ಕಾರಣಕ್ಕೆ ದರ್ಶನ್ ತನ್ನ ಪ್ರೇಯಸಿ ಪವಿತ್ರಾ ಗೌಡಗೆ ಕರೆ ಮಾಡಿದ್ದಾರೆ. ಟೆನ್ಷನ್ ನಲ್ಲಿದ್ದ ಪವಿತ್ರಾ ಗೌಡಗೆ ಪೊಲೀಸರು ಒಂದು ವೇಳೆ ಮನೆಗೆ ಬಂದು ಏನೇ ವಿಚಾರಣೆ ಮಾಡಿದರೂ ನನಗೆ ಏನೂ ಗೊತ್ತಿಲ್ಲ ಎಂದೇ ಹೇಳು ಎಂದು ದರ್ಶನ್ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ ಗಾಬರಿಗೊಂಡಿದ್ದ ಪವಿತ್ರಾ ತನ್ನ ಆಪ್ತ ಪವನ್ ಮೇಲೂ ಕೂಗಾಡಿದ್ದಳು ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಪ್ರಕರಣ ತಮ್ಮ ಕುತ್ತಿಗೆಗೆ ಬರುತ್ತದೆ ಎಂದಾಗ ಎಲ್ಲಾ ಆರೋಪಿಗಳು ಟೆನ್ಷನ್ ಗೊಳಗಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments