Webdunia - Bharat's app for daily news and videos

Install App

ರೇಣುಕಾಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡಗೆ ಕಾಲ್ ಮಾಡಿದ್ದ ದರ್ಶನ್ ಹೇಳಿದ್ದೇನು

Krishnaveni K
ಶುಕ್ರವಾರ, 6 ಸೆಪ್ಟಂಬರ್ 2024 (14:26 IST)
Photo Credit: Facebook
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಈಗಷ್ಟೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ದರ್ಶನ್ ತನ್ನ ಪ್ರೇಯಸಿ ಪವಿತ್ರಾ ಗೌಡಗೆ ಕರೆ ಮಾಡಿ ಹೇಳಿದ್ದೇನು ಎಂಬುದು ಈಗ ಬಯಲಾಗಿದೆ.
 

ದರ್ಶನ್ ಆಂಡ್ ಗ್ಯಾಂಗ್ ನ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡು ಡಿಲೀಟ್ ಆದ ಅಂಶಗಳನ್ನು ರಿಟ್ರೀವ್ ಮಾಡಿದೆ. ದರ್ಶನ್ ಆಂಡ್ ಗ್ಯಾಂಗ್ ಕೊಲೆ ಬಳಿಕ ಯಾರಿಗೆಲ್ಲಾ ಕರೆ ಮಾಡಿದ್ದರು ಎಂಬ ಅಂಶಗಳೂ ಈಗ ಬಯಲಾಗಿದೆ. ಇದೀಗ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಸಂಭಾಷಣೆ ಏನಿತ್ತು ಎಂಬುದು ಬಯಲಾಗಿದೆ.

ರೇಣುಕಾಸ್ವಾಮಿ ಹತ್ಯೆಯ ಬಳಿಕ ದರ್ಶನ್ ಆಂಡ್ ಗ್ಯಾಂಗ್ ಗೆ ಟೆನ್ಷನ್ ಶುರುವಾಗಿದೆ. ಈ ಕಾರಣಕ್ಕೆ ದರ್ಶನ್ ತನ್ನ ಪ್ರೇಯಸಿ ಪವಿತ್ರಾ ಗೌಡಗೆ ಕರೆ ಮಾಡಿದ್ದಾರೆ. ಟೆನ್ಷನ್ ನಲ್ಲಿದ್ದ ಪವಿತ್ರಾ ಗೌಡಗೆ ಪೊಲೀಸರು ಒಂದು ವೇಳೆ ಮನೆಗೆ ಬಂದು ಏನೇ ವಿಚಾರಣೆ ಮಾಡಿದರೂ ನನಗೆ ಏನೂ ಗೊತ್ತಿಲ್ಲ ಎಂದೇ ಹೇಳು ಎಂದು ದರ್ಶನ್ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ ಗಾಬರಿಗೊಂಡಿದ್ದ ಪವಿತ್ರಾ ತನ್ನ ಆಪ್ತ ಪವನ್ ಮೇಲೂ ಕೂಗಾಡಿದ್ದಳು ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಪ್ರಕರಣ ತಮ್ಮ ಕುತ್ತಿಗೆಗೆ ಬರುತ್ತದೆ ಎಂದಾಗ ಎಲ್ಲಾ ಆರೋಪಿಗಳು ಟೆನ್ಷನ್ ಗೊಳಗಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments