Select Your Language

Notifications

webdunia
webdunia
webdunia
webdunia

ಅಭಿಮಾನಿಯೊಬ್ಬರ ಕೊನೆಯಾಸೆ ಈಡೇರಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ್ದೇನು ಗೊತ್ತಾ...?

ಅಭಿಮಾನಿಯೊಬ್ಬರ ಕೊನೆಯಾಸೆ ಈಡೇರಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ್ದೇನು ಗೊತ್ತಾ...?
ಬೆಂಗಳೂರು , ಶನಿವಾರ, 10 ಫೆಬ್ರವರಿ 2018 (06:28 IST)
ಬೆಂಗಳೂರು : ತಮ್ಮ ಅಮೋಘವಾದ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ಸ್ಯಾಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕ್ಯಾನ್ಸರ್ ರೋಗದಿಂದಾಗಿ  ಜೀವನದ ಕೊನೆಯ ಕ್ಷಣಗಳನ್ನು ಎಣಿಸುತ್ತಿರುವ ಅವರ ಅಪ್ಪಟ ಅಭಿಮಾನಿಯೊಬ್ಬರ ಆಸೆಯನ್ನು ಈಡೇರಿಸಿದ್ದಾರೆ.


ಶಿವಮೊಗ್ಗದ ರೇವಂತ್ ಅವರು ತನ್ನ 20ನೇ ವಯಸ್ಸಿಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ.ಇವರಿಗೆ  ದರ್ಶನ್ ಅಂದ್ರೆ ತುಂಬಾ ಇಷ್ಟ. ಪ್ರತಿವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದು ಶುಭ ಹಾರೈಸುತ್ತಿದ್ದ ಇವರಿಗೆ ಈ ವರ್ಷ ದರ್ಶನ್ ಅವರನ್ನು  ಭೇಟಿ ಮಾಡಲು ಸಾಧ್ಯವಿಲ್ಲ ಎಂದು ದುಖಿಃಸುತ್ತಿದ್ದರು. ಹಾಗೇ ತಮ್ಮ ಕಡೆಯ ಆಸೆಯಾಗಿ ದರ್ಶನ್ ಅವರನ್ನು ನೋಡಬೇಕು ಎಂದು ಹಂಬಲಿಸುತ್ತಿದ್ದರು.


ಈ ವಿಷಯ ತಿಳಿದ ದರ್ಶನ್ ಅವರು ರೇವಂತ್ ಅವರಿಗೆ ವಿಡಿಯೋ ಕಾಲ್ ಮಾಡಿ, ನಾನು ಬ್ಯುಸಿಯಾಗಿದ್ದೇನೆ. ಆದಷ್ಟು ಬೇಗ ಬಂದು ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಸಾಂತ್ವನ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಮೀರ್ ಖಾನ್ ಅವರು ಟ್ರೋಲ್ ಗೆ ತುತ್ತಾಗಿದ್ದು ಯಾಕೆ ಗೊತ್ತಾ...?